ಬೆಳಗಾವಿ: ಇಲ್ಲಿ ನ. 6ರಂದು ನಡೆಯಲಿರುವ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ) ಆಡಳಿತ ಮಂಡಳಿ ಚುನಾವಣೆಗೆ ಮಂಗಳವಾರ ಮೂವರು ನಾಮಪತ್ರ ಸಲ್ಲಿಸಿದ್ದಾರೆ.
ಖಾನಾಪುರ ತಾಲ್ಲೂಕು ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಪಾರಿಶ್ವಾಡದ ಮಲ್ಲಿಕಾರ್ಜುನ ಬಸವಣ್ಣೆಪ್ಪ ವಾಲಿ ಮತ್ತು ಕಾರಲಗಾದ ಪರಶುರಾಮ ಯಲ್ಲಾರಿ ಘಾಡಿ ಹಾಗೂ ನೇಕಾರ ಸಹಕಾರ ಸಂಘಗಳ ಕ್ಷೇತ್ರದಿಂದ ಸವದತ್ತಿ ತಾಲ್ಲೂಕು ಕಡಬಿಯ ಸಿದ್ದಾರೂಢ ರೇವಪ್ಪ ರೆಬ್ಬನ್ನವರ ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಸಯೀದಾ ಅಫ್ರೀನಬಾನು ಎಸ್. ಬಳ್ಳಾರಿ ತಿಳಿಸಿದ್ದಾರೆ.
ಇದರೊಂದಿಗೆ ಈವರೆಗೆ ಎಂಟು ಮಂದಿ ಉಮೇದುವಾರಿಕೆ ಸಲ್ಲಿಸಿದಂತಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.