ಬೆಳಗಾವಿ: ಇಲ್ಲಿ ನ. 6ರಂದು ನಡೆಯಲಿರುವ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ) ಆಡಳಿತ ಮಂಡಳಿ ಚುನಾವಣೆಗೆ ಸೋಮವಾರ ಇಬ್ಬರು ನಾಮಪತ್ರ ಸಲ್ಲಿಸಿದ್ದಾರೆ.
‘ರಾಮದುರ್ಗ ತಾಲ್ಲೂಕು ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಆ ತಾಲ್ಲೂಕಿನ ಹೊಸಕೇರಿಯ ಭೀಮಪ್ಪ ಶಿವಪ್ಪ ಬೆಳವಣಕಿ ಮತ್ತು ನೇಕಾರ ಸಹಕಾರ ಸಂಘಗಳ ಕ್ಷೇತ್ರದಿಂದ ಚಿಕ್ಕೋಡಿ ತಾಲ್ಲೂಕಿನ ಕರಗಾಂವದ ಬೀರಪ್ಪ ಸಿದ್ದಪ್ಪ ಮಾಳಿಂಗೆ ನಾಮಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ ಈವರೆಗೆ ಐವರು ಉಮೇದುವಾರಿಕೆ ಸಲ್ಲಿಸಿದಂತಾಗಿದೆ’ ಎಂದು ಚುನಾವಣಾಧಿಕಾರಿ ಸಯೀದಾ ಅಫ್ರೀನಬಾನು ಎಸ್. ಬಳ್ಳಾರಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.