ADVERTISEMENT

ಜನಪ್ರತಿನಿಧಿಗಳ ಸಾಲಿನಲ್ಲಿ ಲಕ್ಷ್ಮಣ ಸವದಿ ಪುತ್ರ!

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2020, 13:53 IST
Last Updated 29 ಮಾರ್ಚ್ 2020, 13:53 IST
ಅಥಣಿಯಲ್ಲಿ ಶನಿವಾರ ನಡೆದ ಅಧಿಕಾರಿಗಳು, ಜನಪ್ರತಿನಿಧಿಗಳ ಸಭೆಯಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿ ವೇದಿಕೆಯಲ್ಲಿ ಆಸೀನರಾಗಿದ್ದರು
ಅಥಣಿಯಲ್ಲಿ ಶನಿವಾರ ನಡೆದ ಅಧಿಕಾರಿಗಳು, ಜನಪ್ರತಿನಿಧಿಗಳ ಸಭೆಯಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿ ವೇದಿಕೆಯಲ್ಲಿ ಆಸೀನರಾಗಿದ್ದರು   

ಅಥಣಿ: ಕೊರೊನ ವೈರಸ್‌ ಹರಡುವುದನ್ನು ತಡೆಯುವ ಉದ್ದೇಶದಿಂದ ಚರ್ಚಿಸಲು ಇಲ್ಲಿನ ತಾಲ್ಲೂಕು ಪಂಚಾಯಿತಿಯಲ್ಲಿ ಶನಿವಾರ ನಡೆದ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆಯಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿ ವೇದಿಕೆಯಲ್ಲಿ ಕುಳಿತಿದ್ದುದು ಅ‌ಚ್ಚರಿಗೆ ಕಾರಣವಾಯಿತು.

ಈ ಫೋಟೊ ಸಾಮಾಜಿಕ ಜಾಲತಾಣಗಳಲ್ಲೂ ಹಬ್ಬಿದೆ. ಸಂಸದರು ಹಾಗೂ ಶಾಸಕರ ಎದುರೇ ಶಿಷ್ಟಾಚಾರ ಉಲ್ಲಂಘಿಸಲಾಗಿದೆ. ಯಾವುದೆ ಚುನಾಯಿತ ಪ್ರತಿನಿಧಿ ಅಲ್ಲದವರನ್ನು ವೇದಿಕೆ ಮೇಲೆ ಕೂರಲು ಅವಕಾಶ ಕೊಟ್ಟಿರುವುದು ಸರಿಯಲ್ಲ ಎನ್ನುವ ವಿರೋಧ ವ್ಯಕ್ತವಾಗಿದೆ. ತಾಲ್ಲೂಕು ದಂಡಾಧಿಕಾರಿ ವೇದಿಕೆ ಮುಂದೆ ಕುಳಿತಿದ್ದರು! ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆಯೂ ವೇದಿಕೆಯಲ್ಲಿರಲಿಲ್ಲ. ಇದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ. ಅದು ಅಧಿಕಾರಿಗಳ ಸಭೆಯೋ, ಬಿಜೆಪಿಯದ್ದೋ ಎಂದು ಹಲವರು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT