ADVERTISEMENT

ಬೆಳಗಾವಿ | ಕಬ್ಬು ನುರಿಸುವಿಕೆ ಪ್ರಮಾಣ ಕುಸಿತ: ಶಿವಾನಂದ ಪಾಟೀಲ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2025, 15:39 IST
Last Updated 17 ಫೆಬ್ರುವರಿ 2025, 15:39 IST
ಶಿವಾನಂದ ಪಾಟೀಲ
ಶಿವಾನಂದ ಪಾಟೀಲ   

ಬೆಳಗಾವಿ: ‘ಈ ವರ್ಷ ರಾಜ್ಯದಾದ್ಯಂತ ಕಬ್ಬು ನುರಿಸುವಿಕೆ ಪ್ರಮಾಣ ಕಳೆದ ವರ್ಷಕ್ಕಿಂತ ಕಡಿಮೆ ಆಗಲಿದೆ. 5 ಲಕ್ಷ ಟನ್ ಕಬ್ಬು ನುರಿಸುವ ನಿರೀಕ್ಷೆಯಿದೆ’ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.‌

‘ಕೆಲ ಸಕ್ಕರೆ ಕಾರ್ಖಾನೆಗಳು ಶೇ 75ರಿಂದ ಶೇ 80ರವರೆಗೆ ಕಬ್ಬಿನ ಬಿಲ್‌ ಪಾವತಿಸಿವೆ. ಕೆಲ ಕಾರ್ಖಾನೆಗಳು ಶೇ 55ರಿಂದ ಶೇ 60ರಷ್ಟು ಪಾವತಿಸಿವೆ. ಎಲ್ಲಾ ಬಾಕಿ ಬಿಲ್‌ಗಳು ಶೀಘ್ರವೇ ಪಾವತಿಯಾಗುವ ವಿಶ್ವಾಸವಿದೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

‘ರಾಜ್ಯದಲ್ಲಿ 72 ಸಕ್ಕರೆ ಕಾರ್ಖಾನೆಗಳಿದ್ದು, ಕಬ್ಬಿನ ತೂಕ ಮಾಡಲು ಅನಲಾಗ್ ತೂಕದ ಯಂತ್ರ ಬಳಸಲಾಗುತಿತ್ತು. ಈಗ ಡಿಜಿಟಲ್ ತೂಕದ ಯಂತ್ರ ಬಳಸಲಾಗುತ್ತಿದೆ. ಸಕ್ಕರೆ ಕಾರ್ಖಾನೆಗಳಲ್ಲಿ ಸರ್ಕಾರವೇ ತೂಕದ ಯಂತ್ರ ಅಳವಡಿಸಲಿದೆ. ಮೊದಲ ಹಂತದಲ್ಲಿ ಎರಡು ಮೊಬೈಲ್ ತೂಕದ ಯಂತ್ರಗಳನ್ನು ಅಳವಡಿಸುತ್ತೇವೆ. ಸ್ಥಳಾವಕಾಶದ ಲಭ್ಯತೆ ಆಧರಿಸಿ ನಂತರದ ದಿನಗಳಲ್ಲಿ ಕಾರ್ಖಾನೆಗಳಲ್ಲಿ ಐದ ರಿಂದ ಆರು ಯಂತ್ರಗಳನ್ನು ಅಳವಡಿಸುತ್ತೇವೆ’ ಎಂದು ಅವರು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.