ADVERTISEMENT

ಸಚಿವ ನಾರಾಯಣಗೌಡ ವಿರುದ್ಧ ರಾಜ್ಯ ದ್ರೋಹ ಪ್ರಕರಣ ದಾಖಲಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2020, 15:37 IST
Last Updated 27 ಫೆಬ್ರುವರಿ 2020, 15:37 IST

ಬೆಳಗಾವಿ: ‘ಮಹಾರಾಷ್ಟ್ರದ ಪರವಾಗಿ ಘೋಷಣೆ ಕೂಗಿರುವ ಪೌರಾಡಳಿತ ಸಚಿವ ನಾರಾಯಣಗೌಡ ವಿರುದ್ಧ ರಾಜ್ಯದ್ರೋಹದ ಪ್ರಕರಣ ದಾಖಲಿಸಬೇಕು’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಒತ್ತಾಯಿಸಿದ್ದಾರೆ.

ಜೈ ಮಹಾರಾಷ್ಟ್ರ, ಜೈ ಶಿವಾಜಿ ಎಂದು ಕಾರ್ಯಕ್ರಮವೊಂದರಲ್ಲಿ ಘೋಷಣೆ ಹಾಕಿರುವ ನಾರಾಯಣಗೌಡ ಅವರ ವಿಡಿಯೊ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್‌ ಆಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಅಶೋಕ ಚಂದರಗಿ, ‘ಪಾಕಿಸ್ತಾನದ ಪರವಾಗಿ ಘೋಷಣೆ ಹಾಕಿರುವವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿದಂತೆ, ಈ ಸಚಿವರ ವಿರುದ್ಧ ರಾಜ್ಯ ದ್ರೋಹದ ಪ್ರಕರಣವನ್ನು ರಾಜ್ಯದ ಪೊಲೀಸರು ಏಕೆ ದಾಖಲಿಸಬಾರದು’ ಎಂದು ಪ್ರಶ್ನಿಸಿದ್ದಾರೆ.

‘ಮುಖ್ಯಮಂತ್ರಿಗಳು ಈ ಸಚಿವರ ನಡೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.