ADVERTISEMENT

ನ್ಯಾಯಬೆಲೆ ಅಂಗಡಿಯವರನ್ನು ಕೊರೊನಾ ಮಂಚೂಣಿ ಯೋಧರೆಂದು ಪರಿಗಣಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಮೇ 2021, 11:53 IST
Last Updated 18 ಮೇ 2021, 11:53 IST
ನ್ಯಾಯಬೆಲೆ ಅಂಗಡಿಯವರನ್ನು ಕೊರೊನಾ ಮುಂಚೂಣಿ ಯೋಧರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘ ಬೆಳಗಾವಿ ಜಿಲ್ಲಾ ಘಟಕದವರು ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು
ನ್ಯಾಯಬೆಲೆ ಅಂಗಡಿಯವರನ್ನು ಕೊರೊನಾ ಮುಂಚೂಣಿ ಯೋಧರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘ ಬೆಳಗಾವಿ ಜಿಲ್ಲಾ ಘಟಕದವರು ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು   

ಬೆಳಗಾವಿ: ನ್ಯಾಯಬೆಲೆ ಅಂಗಡಿಯವರನ್ನು ಕೊರೊನಾ ಮುಂಚೂಣಿ ಯೋಧರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

‘ಕೋವಿಡ್ ಕಾರಣದಿಂದ ಬಯೊಮೆಟ್ರಿಕ್ ವ್ಯವಸ್ಥೆ ರದ್ದುಗೊಳಿಸಿ ಮ್ಯಾನ್ಯುಯೆಲ್ ಅಥವಾ ಮೊಬೈಲ್‌ ಫೋನ್‌ ಒಟಿಪಿ ಸಂದೇಶ ಆಧರಿಸಿ ಪಡಿತರ ವಿತರಣೆಗೆ ಅವಕಾಶ ಕಲ್ಪಿಸಬೇಕು. ನ್ಯಾಯಬೆಲೆ ಅಂಗಡಿಗಳವರು ಹಾಗೂ ಅವರ ಕುಟುಂಬದವರಿಗೆ ಕೋವಿಡ್ ಲಸಿಕೆಯನ್ನು ಆದ್ಯತೆಯ ಮೇಲೆ ಕೊಡಿಸಬೇಕು. ಕೋವಿಡ್ ಆಸ್ಪತ್ರೆಯಲ್ಲಿ ಹಾಸಿಗೆ ಮೀಸಲಿಸಡಬೇಕು. ಕಮಿಷನ್‌ ಅನ್ನು ಸಕಾಲಕ್ಕೆ ಪಾವತಿಸಬೇಕು ಹಾಗೂ ವಿಶೇಷ ಪ್ಯಾಕೇಜ್‌ನಲ್ಲಿ ನಮ್ಮನ್ನೂ ಒಳಗೊಳಿಸಬೇಕು’ ಎಂದು ಒತ್ತಾಯಿಸಿದರು.

ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ರಾಜಶೇಖರ ತಳವಾರ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದಿನೇಶ ಚಂದ್ರಶೇಖರ ಬಾಗಡೆ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.