ADVERTISEMENT

ಪಾಲಿಕೆ ಚುನಾವಣೆ ನಡೆಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 27 ಜನವರಿ 2020, 12:03 IST
Last Updated 27 ಜನವರಿ 2020, 12:03 IST
ಬೆಳಗಾವಿ ಪಾಲಿಕೆಯ ನಗರ ಸೇವಕರ ಚುನಾವಣೆ ನಡೆಸುವಂತೆ ಒತ್ತಾಯಿಸಿ ಮಾಜಿ ನಗರ ಸೇವಕ ಅಸೋಸಿಯೇಷನ್‌ ಸದಸ್ಯರು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ ಪಾಲಿಕೆಯ ನಗರ ಸೇವಕರ ಚುನಾವಣೆ ನಡೆಸುವಂತೆ ಒತ್ತಾಯಿಸಿ ಮಾಜಿ ನಗರ ಸೇವಕ ಅಸೋಸಿಯೇಷನ್‌ ಸದಸ್ಯರು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.   

ಬೆಳಗಾವಿ: ನಗರಪಾಲಿಕೆ ಸದಸ್ಯರ ಚುನಾವಣೆ ನಡೆಸುವಂತೆ ಒತ್ತಾಯಿಸಿ ಮಾಜಿ ನಗರಸೇವಕರ ಸಂಘದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಅವರಿಗೆ ಮನವಿ ಸಲ್ಲಿಸಿದರು.

‘ಪಾಲಿಕೆಯ ಸದಸ್ಯರ ಅಧಿಕಾರದ ಅವಧಿ ಮುಗಿದು ಹಲವು ತಿಂಗಳುಗಳೇ ಕಳೆದಿವೆ. ಆದರೆ, ಇಲ್ಲಿವರೆಗೂ ಚುನಾವಣೆ ನಡೆದಿಲ್ಲ. ಇದರಿಂದಾಗಿ ಸ್ಥಳೀಯ ಕೆಲಸಗಳು ಹಾಗೇ ಉಳಿದುಕೊಂಡಿವೆ. ಸಾರ್ವಜನಿಕರು ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಚುನಾವಣೆ ನಡೆಸುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.

ಅಧ್ಯಕ್ಷ ನಾಗೇಶ ಸಾತೇರಿ ಮಾತನಾಡಿ, ‘ನಗರ ಸೇವಕರು ಇಲ್ಲದೆ ಇರುವುದರಿಂದ ಅಧಿಕಾರಿಗಳನ್ನು ಕೇಳುವವರೇ ಇಲ್ಲವಾಗಿದ್ದಾರೆ. ಕೂಡಲೇ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಸಂಘದ ಸದಸ್ಯರಾದ ಸಿದ್ದನಗೌಡ ಪಾಟೀಲ, ಗೋವಿಂದ ರಾವುತ್, ನಿಂಗಪ್ಪ ನಿರ್ವಾಣಿ, ಶಿವಾಜಿ ಸುಂಠಕರ, ಧನರಾಜ ಗವಳಿ, ದೀಪಕ ವಾಘೇಲಾ, ನೇತಾಜಿ ಜಾಧವ, ಶಾಂತಿನಾಥ ಬುಡವಿ, ಅಪ್ಪಾಸಾಹೇಬ ಪುಜಾರಿ, ಕಿರಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.