ಬೆಳಗಾವಿ: ‘ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಒಂದು ಕುಟುಂಬಕ್ಕೆ 200 ದಿನ ಉದ್ಯೋಗ ನೀಡಬೇಕು’ ಎಂದು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ಸರ್ಕಾರವನ್ನು ಒತ್ತಾಯಿಸಿದೆ.
ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿರುವ ಸಂಘಟನೆಯ ಪದಾಧಿಕಾರಿಗಳು, ‘ಖಾತ್ರಿ ಯೋಜನೆಯಲ್ಲಿ ಪ್ರಸ್ತುತ 100 ದಿನಗಳು ಉದ್ಯೋಗ ನೀಡಲಾಗುತ್ತಿದೆ. ಈ ವರ್ಷ ಕೋವಿಡ್ ಲಾಕ್ಡೌನ್, ನಗರಗಳಿಂದ ವಲಸೆ, ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ಜನರು ಸಂಕಷ್ಟದಲ್ಲಿರುವುದರಿಂದಾಗಿ ಬಹಳಷ್ಟು ಕುಟುಂಬಗಳು 100 ದಿನಗಳ ಮಾನವ ದಿನಗಳನ್ನು ಮುಗಿಸಿವೆ. ಹೀಗಾಗಿ 200 ದಿನಗಳಿಗೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.
‘ಪಡಿತರ ಚೀಟಿ ಹೊಂದಿರುವವರಿಗೆ ತಲಾ 5 ಕೆ.ಜಿ. ಹೆಚ್ಚುವರಿ ಪಡಿತರವನ್ನು ಇನ್ನೂ 6 ತಿಂಗಳವರೆಗೆ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.