ADVERTISEMENT

ವಿಠ್ಠಲ ದೇವರ ದರ್ಶನಕ್ಕೆ ಅವಕಾಶ: ಆಗ್ರಹ

​ಪ್ರಜಾವಾಣಿ ವಾರ್ತೆ
Published 12 ಜುಲೈ 2021, 12:31 IST
Last Updated 12 ಜುಲೈ 2021, 12:31 IST
ಪಂಢರಪುರದಲ್ಲಿ ವಿಠ್ಠಲ ದೇವರ ದರ್ಶನಕ್ಕೆ ಅವಕಾಶ ನೀಡುವಂತೆ ಆಗ್ರಹಿಸಿ ವಾರಕರಿ ಸಂಪ್ರದಾಯದ ವಿಠ್ಠಲದೇವರ ಭಕ್ತರು ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ಭಜನೆ ಮಾಡುತ್ತಾ ಸೋಮವಾರ ಪ್ರತಿಭಟನೆ ನಡೆಸಿದರುಪ್ರಜಾವಾಣಿ ಚಿತ್ರ
ಪಂಢರಪುರದಲ್ಲಿ ವಿಠ್ಠಲ ದೇವರ ದರ್ಶನಕ್ಕೆ ಅವಕಾಶ ನೀಡುವಂತೆ ಆಗ್ರಹಿಸಿ ವಾರಕರಿ ಸಂಪ್ರದಾಯದ ವಿಠ್ಠಲದೇವರ ಭಕ್ತರು ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ಭಜನೆ ಮಾಡುತ್ತಾ ಸೋಮವಾರ ಪ್ರತಿಭಟನೆ ನಡೆಸಿದರುಪ್ರಜಾವಾಣಿ ಚಿತ್ರ   

ಬೆಳಗಾವಿ: ‘ಪಂಢರಪುರದಲ್ಲಿ ವಿಠ್ಠಲ ದೇವರ ದರ್ಶನಕ್ಕೆ ಅವಕಾಶ ನೀಡಬೇಕು’ ಎಂದು ಆಗ್ರಹಿಸಿ ವಾರಕರಿ ಸಂಪ್ರದಾಯದ ವಿಠ್ಠಲದೇವರ ಭಕ್ತರು ಶಿವಪ್ರತಿಷ್ಠಾನ ಹಿಂದೂಸ್ಥಾನ ಸಂಘಟನೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಭಜನೆ ಮಾಡುತ್ತಾ ಪಾದಯಾತ್ರೆಯಲ್ಲಿ ಬಂದು ಮನವಿ ಸಲ್ಲಿಸಿದರು.

‘ಲಾಕ್‍ಡೌನ್ ತೆರವಾದರೂ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡುತ್ತಿಲ್ಲ. ಆಷಾಢ ಮಾಸದಲ್ಲಿ ಪಂಢರಪುರದ ವಿಠ್ಠಲ ದೇವರಿಗೆ ವಿಶೇಷ ಪೂಜೆ–ಪುನಸ್ಕಾರಗಳು ನಡೆಯುತ್ತವೆ. ಭಜನೆ–ಪ್ರಾರ್ಥನೆ ನೆರವೇರುತ್ತದೆ. ಅಲ್ಲಿಗೆ ಭಕ್ತರಿಗೆ ಪ್ರವೇಶ ನೀಡುವಂತಾಗಲು ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳು ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.