ADVERTISEMENT

ಕೆಎಟಿ ಆದೇಶ ಪಾಲಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 11 ಜುಲೈ 2021, 12:53 IST
Last Updated 11 ಜುಲೈ 2021, 12:53 IST
ಶಿಕ್ಷಣ ಇಲಾಖೆಯಲ್ಲಿ ಅವೈಜ್ಞಾನಿಕವಾಗಿ ನೀಡಿದ ಬಡ್ತಿಗೆ ಕಡಿವಾಣ ಹಾಕಿದ ಕೆಎಟಿ ಆದೇಶ ಪಾಲಿಸುವಂತೆ ಆಗ್ರಹಿಸಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆ ಚಿಕ್ಕೋಡಿ ಜಿಲ್ಲಾ ಘಟಕದವರು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಈಚೆಗೆ ಮನವಿ ಸಲ್ಲಿಸಿದರು
ಶಿಕ್ಷಣ ಇಲಾಖೆಯಲ್ಲಿ ಅವೈಜ್ಞಾನಿಕವಾಗಿ ನೀಡಿದ ಬಡ್ತಿಗೆ ಕಡಿವಾಣ ಹಾಕಿದ ಕೆಎಟಿ ಆದೇಶ ಪಾಲಿಸುವಂತೆ ಆಗ್ರಹಿಸಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆ ಚಿಕ್ಕೋಡಿ ಜಿಲ್ಲಾ ಘಟಕದವರು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಈಚೆಗೆ ಮನವಿ ಸಲ್ಲಿಸಿದರು   

ಪರಮಾನಂದವಾಡಿ (ಬೆಳಗಾವಿ ಜಿಲ್ಲೆ): ‘ಶಿಕ್ಷಣ ಇಲಾಖೆಯಲ್ಲಿ ಅವೈಜ್ಞಾನಿಕವಾಗಿ ನೀಡಿದ ಬಡ್ತಿಗೆ ಕಡಿವಾಣ ಹಾಕಿದ ಕೆಎಟಿ (ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ) ಆದೇಶವನ್ನು ಪಾಲಿಸಬೇಕು’ ಎಂದು ಆಗ್ರಹಿಸಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆ (ಜಿಪಿಟಿ) ಚಿಕ್ಕೋಡಿ ಜಿಲ್ಲಾ ಘಟಕದವರು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಅಥಣಿಯಲ್ಲಿ ಈಚೆಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸವದಿ, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೃತ್ತಿಗೆ ಸಂಬಂಧಿಸಿದ ಸಮಸ್ಯೆಯನ್ನು ಪರಿಹರಿಸಲಾಗುವುದು’ ಎಂದು ಭರವಸೆ ನೀಡಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಅಸ್ಲಂ ಮುಲ್ಲಾ, ಗೌರವಾಧ್ಯಕ್ಷ ಅಶೋಕ ಡಾಬಳಿ, ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಕೊಣ್ಣೂರ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.