ಬೆಳಗಾವಿ: ‘ನಗರಪಾಲಿಕೆ ವ್ಯಾಪ್ತಿಯಲ್ಲಿ ಈ ವರ್ಷ ಆಸ್ತಿ ತೆರಿಗೆ ಪರಿಷ್ಕರಣೆ ಪ್ರಕ್ರಿಯೆ ನಡೆಸಬಾರದು’ ಎಂದು ಆಗ್ರಹಿಸಿ ನಗರಪಾಲಿಕೆ ಮಾಜಿ ಸದಸ್ಯರ ಸಂಘದವರು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
‘ಕೋವಿಡ್–19 ಲಾಕ್ಡೌನ್ನಿಂದಾಗಿ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ದುಡಿಮೆ, ಗಳಿಕೆ ಇಲ್ಲದೆ ಕಂಗಾಲಾಗಿದ್ದಾರೆ. ಹೀಗಾಗಿ, ಅವರ ಆರ್ಥಿಕ ಪರಿಸ್ಥಿತಿ ಸುಧಾರಿಸುವವರೆಗೂ ಆಸ್ತಿ ತೆರಿಗೆ ಹೆಚ್ಚಿಸಲು ಸರ್ಕಾರ ಮುಂದಾಗಬಾರದು. ಗಾಯದ ಮೇಲೆ ಬರೆ ಎಳೆಯಬಾರದು. ಪರಿಷ್ಕರಣೆಯನ್ನು ಮುಂದಿನ ವರ್ಷಕ್ಕೆ ಮುಂದೂಡಬೇಕು’ ಎಂದು ಒತ್ತಾಯಿಸಿದರು.
ಅಧ್ಯಕ್ಷ ನಾಗೇಶ ಸಾತೇರಿ ಹಾಗೂ ಸದಸ್ಯರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.