ADVERTISEMENT

ಅತಿವೃಷ್ಟಿಯಿಂದ ಹಾನಿ: ಜಿಲ್ಲಾಧಿಕಾರಿಯಿಂದ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2021, 16:00 IST
Last Updated 26 ಜುಲೈ 2021, 16:00 IST
ಅತಿವೃಷ್ಟಿಯಿಂದಾಗಿ ಖಾನಾಪುರದಲ್ಲಿ ರಸ್ತೆ ಹಾಳಾಗಿರುವುದನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೋಮವಾರ ವೀಕ್ಷಿಸಿದರು
ಅತಿವೃಷ್ಟಿಯಿಂದಾಗಿ ಖಾನಾಪುರದಲ್ಲಿ ರಸ್ತೆ ಹಾಳಾಗಿರುವುದನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೋಮವಾರ ವೀಕ್ಷಿಸಿದರು   

ಬೆಳಗಾವಿ: ಇತ್ತೀಚೆಗೆ ಸುರಿದ ವ್ಯಾಪಕ ‌ಮಳೆಯಿಂದಾಗಿ ಖಾನಾಪುರದಲ್ಲಿ ಹಾನಿಗೊಳಗಾಗಿರುವ ರಸ್ತೆ, ಸೇತುವೆಯನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೋಮವಾರ ಪರಿಶೀಲಿಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದರು.

ಮಲಪ್ರಭಾ ನದಿ ಹಾಗೂ ಸಮೀಪದ ಹಳ್ಳದ ನೀರಿನಿಂದ ಪೊಲೀಸ್ ತರಬೇತಿ ಶಾಲೆ ಜಲಾವೃತಗೊಂಡಿರುವುದನ್ನು ವೀಕ್ಷಿಸಿದರು. ರಾಮನಗರ-ಲೋಂಡಾ ರಸ್ತೆ ತೀವ್ರ ಹಾನಿಗೊಳಗಾಗಿರುವ ಕುರಿತು ತಹಶೀಲ್ದಾರ್‌ರಿಂದ ಮಾಹಿತಿ ಪಡೆದರು. ದುರಸ್ತಿಗೆ ಕೂಡಲೆ ಕ್ರಮ ವಹಿಸುವಂತೆ ಹೆದ್ದಾರಿ ವಿಭಾಗದ ಯೋಜನಾ ನಿರ್ದೇಶಕರಿಗೆ ಮೊಬೈಲ್‌ ಫೋನ್‌ನಲ್ಲಿ ಸೂಚಿಸಿದರು.

ಖಾನಾಪುರ ತಹಶೀಲ್ದಾರ್‌ ರೇಷ್ಮಾ ತಾಳಿಕೋಟಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.