ಬೆಳಗಾವಿ: ಇತ್ತೀಚೆಗೆ ಸುರಿದ ವ್ಯಾಪಕ ಮಳೆಯಿಂದಾಗಿ ಖಾನಾಪುರದಲ್ಲಿ ಹಾನಿಗೊಳಗಾಗಿರುವ ರಸ್ತೆ, ಸೇತುವೆಯನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೋಮವಾರ ಪರಿಶೀಲಿಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದರು.
ಮಲಪ್ರಭಾ ನದಿ ಹಾಗೂ ಸಮೀಪದ ಹಳ್ಳದ ನೀರಿನಿಂದ ಪೊಲೀಸ್ ತರಬೇತಿ ಶಾಲೆ ಜಲಾವೃತಗೊಂಡಿರುವುದನ್ನು ವೀಕ್ಷಿಸಿದರು. ರಾಮನಗರ-ಲೋಂಡಾ ರಸ್ತೆ ತೀವ್ರ ಹಾನಿಗೊಳಗಾಗಿರುವ ಕುರಿತು ತಹಶೀಲ್ದಾರ್ರಿಂದ ಮಾಹಿತಿ ಪಡೆದರು. ದುರಸ್ತಿಗೆ ಕೂಡಲೆ ಕ್ರಮ ವಹಿಸುವಂತೆ ಹೆದ್ದಾರಿ ವಿಭಾಗದ ಯೋಜನಾ ನಿರ್ದೇಶಕರಿಗೆ ಮೊಬೈಲ್ ಫೋನ್ನಲ್ಲಿ ಸೂಚಿಸಿದರು.
ಖಾನಾಪುರ ತಹಶೀಲ್ದಾರ್ ರೇಷ್ಮಾ ತಾಳಿಕೋಟಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.