ADVERTISEMENT

ಸುರೇಶ ಅಂಗಡಿ ಕುಟುಂಬದವರಿಗೆ ಕಾಂಗ್ರೆಸ್ ನಾಯಕರಿಂದ ಸಾಂತ್ವನ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 16:02 IST
Last Updated 2 ಅಕ್ಟೋಬರ್ 2020, 16:02 IST
ಬೆಳಗಾವಿಯಲ್ಲಿ ಸುರೇಶ ಅಂಗಡಿ ಕುಟುಂಬದವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಮುಖಂಡರು ಶುಕ್ರವಾರ ಸಾಂತ್ವನ ಹೇಳಿದರು
ಬೆಳಗಾವಿಯಲ್ಲಿ ಸುರೇಶ ಅಂಗಡಿ ಕುಟುಂಬದವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಮುಖಂಡರು ಶುಕ್ರವಾರ ಸಾಂತ್ವನ ಹೇಳಿದರು   

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮುಖಂಡರು ಇಲ್ಲಿನ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ದಿ.ಸುರೇಶ ಅಂಗಡಿ ಅವರ ಕುಟುಂಬದವರಿಗೆ ಶುಕ್ರವಾರ ರಾತ್ರಿ ಸಾಂತ್ವನ ಹೇಳಿದರು.

ಶಾಸಕರಾದ ಸತೀಶ ಜಾರಕಿಹೊಳಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ, ಡಾ.ಅಂಜಲಿ ನಿಂಬಾಳ್ಕರ್ ಮತ್ತು ಮಹಾಂತೇಶ ಕೌಜಗಲಿ ಧೈರ್ಯ ಹೇಳಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಿವಕುಮಾರ್, ‘ಸುರೇಶ ಅಂಗಡಿ ಬಹಳ ಸೌಮ್ಯ ಸ್ವಭಾವದವರಾಗಿದ್ದರು. ನನ್ನೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದರು. ಭೇಟಿಯೂ ಆಗಿದ್ದೆ. ಸಚಿವರಾದ ನಂತರವೂ ಹಲವು ಬಾರಿ ಮಾತನಾಡಿದ್ದೆವು. ಅವರ ಅಕಾಲಿಕ ನಿಧನ ನಮಗೂ ಬಹಳ ದುಃಖವನ್ನುಂಟು ಮಾಡಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.