ಬೆಳಗಾವಿ: ‘ಕೊಳೆ ಈಗ ನಮ್ಮೊಂದಿಗಿಲ್ಲ. ದೂರ ಹೋಗಿದೆ. ಅಂಥವರನ್ನು ಇಟ್ಟುಕೊಂಡಿದ್ದರೆ ಕಷ್ಟ ಆಗುತ್ತಿತ್ತು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದರು.
ಸೋಮವಾರ ನಡೆದ ಮುಖಂಡರು ಹಾಗೂ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕಾಂಗ್ರೆಸ್ ನಾಯಕ ಭರಮಗೌಡ (ರಾಜು) ಕಾಗೆ ಮನೆಗೆ ರಮೇಶ ಜಾರಕಿಹೋಳಿ ಭೇಟಿ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ‘ಬೇರೆ ಪಕ್ಷದವರನ್ನು ಪಕ್ಷದ ನಾಯಕರು ಮನೆಗೆ ಸೇರಿಸಬಾರದು’ ಎಂದೂ ಹೇಳಿದರು.
‘ಬೆಳಗಾವಿ ಚುನಾವಣೆಯನ್ನು ಇಡೀ ರಾಜ್ಯ ನೋಡುತ್ತಿದೆ. ಕಳೆದ ಚುನಾವಣೆಯಲ್ಲಿ ನಾವು ಶಿಸ್ತುಕ್ರಮ ವಹಿಸಲಿಲ್ಲ. ಹೀಗಾಗಿ ಈಗ ತೊಂದರೆ ಅನುಭವಿಸುತ್ತಿದ್ದೇವೆ’ ಎಂದರು.
ಅವರ್ಯಾವ ದೊಡ್ಡ ಸಾಹುಕಾರ?:‘ನಮ್ಮ ನಾಯಕರು ಬಿಜೆಪಿಯವರ ಜೊತೆ ಏಕೆ ನೆಂಟಸ್ತಿಕೆ ಇಟ್ಟುಕೊಂಡಿದ್ದೀರಿ? ಮನೆಗೆ ಸೇರಿಸುತ್ತಿದ್ದೀರೇಕೆ, ವಾಹನ ಕಳುಹಿಸಿದರೆಂದು ಹೋಗುತ್ತೀರೇಕೆ? ಅವರ್ಯಾವ ಡೊಡ್ಡ ಸಾಹುಕಾರ? ನೆಂಟಸ್ತನ ಅಥವಾ ವಿಶ್ವಾಸವನ್ನು ಚುನಾವಣೆ ವೇಳೆ ಇಟ್ಟುಕೊಳ್ಳಬೇಡಿ’ ಎಂದು ತಿಳಿಸಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.