ADVERTISEMENT

‘ನನ್ನ ಹಿಂದೆ ಸುತ್ತಬೇಡಿ, ರಕ್ಷಣಾ ಕಾರ್ಯದಲ್ಲಿ ತೊಡಗಿ’

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2019, 19:15 IST
Last Updated 7 ಆಗಸ್ಟ್ 2019, 19:15 IST

ಬೆಳಗಾವಿ: ‘ಅಧಿಕಾರಿಗಳು ನನ್ನ ಹಿಂದೆ ಸುತ್ತುವುದನ್ನು ಬಿಟ್ಟು, ಪ್ರವಾಹದಿಂದ ತತ್ತರಿಸಿರುವ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.

ಇಲ್ಲಿನ ಖಾಸಬಾಗದ ಸಾಯಿ ಭವನದಲ್ಲಿ ಪರಿಹಾರ ಕೇಂದ್ರಕ್ಕೆ ಬುಧವಾರ ರಾತ್ರಿ ಭೇಟಿ ನೀಡಿದ ಅವರು ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು.

‘ಕೆಲವೇ ಹಿರಿಯ ಅಧಿಕಾರಿಗಳು ಮಾತ್ರ ನನ್ನ ಜೊತೆಗಿರಬೇಕು. ಉಳಿದವರು ವಹಿಸಿದ ಕೆಲಸವನ್ನು ಮುಂದುವರಿಸಬೇಕು. ಸಂತ್ರಸ್ತರಿಗೆ ನೆರವಾಗಲು ಸಮರೋಪಾದಿಯಲ್ಲಿ ಶ್ರಮಿಸಬೇಕು’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.