ಬೆಳಗಾವಿ: 'ತೌಕ್ತೆ' ಚಂಡಮಾರುತ ಪರಿಣಾಮ ಜೋರು ಗಾಳಿ ಸಮೇತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ.
ಪ್ರತಿಕೂಲ ವಾತಾವರಣ ಇರುವುದರಿಂದ ಹೈದರಾಬಾದ್ ಹಾಗೂ ತಿರುಪತಿ ವಿಮಾನಗಳ ಹಾರಾಟ ರದ್ದಾಗಿದೆ.
ಪರಿಸ್ಥಿತಿ ಅವಲೋಕಿಸಿ ಮುಂದಿನ ವಿಮಾನಗಳ ಹಾರಾಟದ ಬಗ್ಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಸೂಚನೆಯಂತೆ ಕ್ರಮ ಕೈಗೊಳ್ಳಲಾಗುವುದು ಎಂದು ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶ್ ಕುಮಾರ್ ಮೌರ್ಯ ಪ್ರಜಾವಾಣಿಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.