ADVERTISEMENT

ಸಮ್ಮಿಶ್ರ ಸರ್ಕಾರ ಬೀಳಿಸಲು ಮುಂಬೈ, ದೆಹಲಿಗೆ ಹೋಗಿದ್ದರು; ಲಕ್ಷ್ಮಿ ಟಾಂಗ್‌

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2019, 14:15 IST
Last Updated 19 ಏಪ್ರಿಲ್ 2019, 14:15 IST

ಬೆಳಗಾವಿ: ‘ರಾಜ್ಯದಲ್ಲಿರುವ ಜೆಡಿಎಸ್‌– ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಬೀಳಿಸಲು ಒಮ್ಮೆ ಮುಂಬೈಗೆ, ಒಮ್ಮೆ ದೆಹಲಿಗೆ ಹೋಗಿದ್ದರು. ನಮಗೆ ಕೆಲಸ ಮಾಡಲು ಬಿಡಲಿಲ್ಲ’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪರೋಕ್ಷವಾಗಿ ಶಾಸಕ ರಮೇಶ ಜಾರಕಿಹೊಳಿಗೆ ಟಾಂಗ್‌ ನೀಡಿದರು.

ತಾಲ್ಲೂಕಿನ ಹಲಗಾದಲ್ಲಿ ಗುರುವಾರ ರಾತ್ರಿ ನಡೆದ ಚುನಾವಣಾ ಪ್ರಚಾರದ ಸಭೆಯಲ್ಲಿ ಅವರು ಮಾತನಾಡಿದರು. ‘ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದಾಗಿನಿಂದ ಈ ಸರ್ಕಾರವನ್ನು ಬೀಳಿಸಲು ಆಪರೇಷನ್‌ ಕಮಲ ಮಾಡಲು ಪ್ರಯತ್ನಿಸಿದರು. ಒಬ್ಬೊಬ್ಬ ಶಾಸಕರಿಗೆ ₹ 20 ಕೋಟಿ, ₹ 30 ಕೋಟಿ ಆಮಿಷ್ ಒಡ್ಡಿದ್ದರು’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT