ADVERTISEMENT

ಬೆಳಗಾವಿ: ಪತ್ರಕರ್ತರು, ಬರಹಗಾರರ ಸಹಕಾರ ಸಂಘಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2021, 14:23 IST
Last Updated 27 ನವೆಂಬರ್ 2021, 14:23 IST
ಬೆಳಗಾವಿಯಲ್ಲಿ ಪತ್ರಕರ್ತರು ಹಾಗೂ ಬರಹಗಾರರ ಸಹಕಾರ ಸಂಘದ ಪದಾಧಿಕಾರಿಗಳನ್ನು ಶನಿವಾರ ನಡೆದ ಸದಸ್ಯರ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು
ಬೆಳಗಾವಿಯಲ್ಲಿ ಪತ್ರಕರ್ತರು ಹಾಗೂ ಬರಹಗಾರರ ಸಹಕಾರ ಸಂಘದ ಪದಾಧಿಕಾರಿಗಳನ್ನು ಶನಿವಾರ ನಡೆದ ಸದಸ್ಯರ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು   

ಬೆಳಗಾವಿ: ಇಲ್ಲಿನ ಪತ್ರಕರ್ತರು ಹಾಗೂ ಬರಹಗಾರರ ಸಹಕಾರ ಸಂಘದ ಪದಾಧಿಕಾರಿಗಳನ್ನು ಶನಿವಾರ ನಡೆದ ಸದಸ್ಯರ ಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಕಣಬುರ್ಗಿಯ ಎ.ಎಸ್. ವೀರಗೌಡರ, ಉಪಾಧ್ಯಕ್ಷರಾಗಿ ನಿವೃತ್ತ ಮುಖ್ಯಶಿಕ್ಷಕ ಶರಣಗೌಡ ಪಾಟೀಲ, ಎಂಡಿಯಾಗಿ ಹಸಿರು
ಕ್ರಾಂತಿ ದಿನಪತ್ರಿಕೆಯ ಸಂಪಾದಕ ಸಂಪತ್ ಕುಮಾರ್ ಮುಚಳಂಬಿ ಆಯ್ಕೆಯಾದರು.

ಆಡಳಿತ ಮಂಡಳಿ ಸದಸ್ಯರಾದ ಜಲತ್ಕುಮಾರ ಪುಣಜಗೌಡ, ಸ.ರಾ. ಸುಳಕೂಡೆ, ಬಸವರಾಜ ಗಾರ್ಗಿ, ಮಹಾಂತೇಶ ಮೆಣಸಿನಕಾಯಿ, ಎಸ್.ಎಸ್. ರತ್ತು, ಸಿ.ಎಂ. ಬೂದಿಹಾಳ, ಬಸವರಾಜ ಸುಣಗಾರ ಪಾಲ್ಗೊಂಡಿದ್ದರು.

ADVERTISEMENT

ಇದಕ್ಕೂ ಮುನ್ನ, ರೈತ ಹೋರಾಟಗಾರ ಕಲ್ಯಾಣರಾವ್ ಮುಚಳಂಬಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.