ADVERTISEMENT

ಭೀಮಪ್ಪ ಪುತ್ರಗೆ ನೌಕರಿ ಭರವಸೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 13:43 IST
Last Updated 7 ಅಕ್ಟೋಬರ್ 2021, 13:43 IST

ಬೆಳಗಾವಿ: ತಾಲ್ಲೂಕಿನ ಬಡಾಲ ಅಂಕಲಗಿಯಲ್ಲಿ ಗೋಡೆ ಬಿದ್ದಿದ್ದರಿಂದ ಕುಟುಂಬದ ಆರು ಮಂದಿಯನ್ನು ಕಳೆದುಕೊಂಡಿರುವ ಭೀಮಪ್ಪ ಖನಗಾಂವಿ ಅವರ ಕೋರಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸರ್ಕಾರಾತ್ಮಕವಾಗಿ ಸ್ಪಂದಿಸಿದರು.

‘ನನ್ನ ಮಗ ದೇವರಾಜ್‌ ಪಿಯುಸಿ ಓದಿದ್ದಾನೆ. ಅವನಿಗೆ ಉದ್ಯೋಗ ದೊರಕಿಸಿಕೊಟ್ಟರೆ ಅನುಕೂಲವಾಗುತ್ತದೆ’ ಎಂದು ಮನವಿ ಮಾಡಿದರು.

‘ಆ ಯುವಕನ ವಿದ್ಯಾರ್ಹತೆ ಪರಿಶೀಲಿಸಿ, ಸರ್ಕಾರಿ ಹಾಸ್ಟೆಲ್‌ನಲ್ಲಿ ಕೆಲಸ ನೀಡುವ ಬಗ್ಗೆ ಪರಿಶೀಲಿಸಬೇಕು’ ಎಂದು ಸಚಿವರು ಜಿ.ಪಂ. ಸಿಇಒ ಎಚ್‌.ವಿ. ದರ್ಶನ್‌ ಅವರಿಗೆ ಸೂಚಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.