ADVERTISEMENT

ಬೆಳಗಾವಿಯವರೆಗೆ ಸೇವೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ಶೆಟ್ಟರ್ ಪತ್ರ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2024, 14:04 IST
Last Updated 15 ಸೆಪ್ಟೆಂಬರ್ 2024, 14:04 IST
ಜಗದೀಶ ಶೆಟ್ಟರ್‌
ಜಗದೀಶ ಶೆಟ್ಟರ್‌   

ಬೆಳಗಾವಿ: ‘ಬೆಂಗಳೂರು–ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿ’ ಎಂದು ಸಂಸದ ಜಗದೀಶ ಶೆಟ್ಟರ್‌ ಅವರು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಭಾನುವಾರ ಪತ್ರ ಬರೆದಿದ್ದಾರೆ.

‘ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕೆಂಬ ಜನರ ಬೇಡಿಕೆ ಬಹಳ ದಿನಗಳಿಂದ ಇದೆ. ಈ ಹಿಂದೆ ಬೆಳಗಾವಿಯವರೆಗೆ ಕೈಗೊಂಡಿದ್ದ ರೈಲಿನ ಪ್ರಾಯೋಗಿಕ ಸಂಚಾರವೂ ಯಶಸ್ವಿಯಾಗಿತ್ತು. ಆದರೆ, ತಾಂತ್ರಿಕ ಕಾರಣ ನೀಡಿದ ರೈಲ್ವೆ ಅಧಿಕಾರಿಗಳು ಸಂಚಾರ ಆರಂಭಿಸಿಲ್ಲ. ಈ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT