ಬೆಳಗಾವಿ: ನಿಗದಿಪಡಿಸಿದಂತೆ ಪಡಿತರ ವಿತರಿಸದೇ ಇರುವ, ಕಾರ್ಡ್ದಾರರ ಜೊತೆ ಸೌಜನ್ಯತೆಯಿಂದ ವರ್ತಿಸದೇ ಇರುವ ಹಾಗೂ ಸಮಯಕ್ಕೆ ಸರಿಯಾಗಿ ಅಂಗಡಿ ತೆರೆಯದೇ ಇದ್ದುದರಿಂದ ಅಲಾರವಾಡದ ನ್ಯಾಯಬೆಲೆ ಅಂಗಡಿ ಸಂಖ್ಯೆ 237 ಅನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಅಮಾನತುಪಡಿಸಿದ್ದಾರೆ.
ಈ ನ್ಯಾಯಬೆಲೆ ಅಂಗಡಿಯ ಬಗ್ಗೆ ಪಡಿತರ ಚೀಟಿದಾರರು ಸಾಕಷ್ಟು ದೂರುಗಳನ್ನು ಸಲ್ಲಿಸಿದ್ದರು. ದೂರಿನ ಮೇರೆಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತನಿಖೆ ಮಾಡಿ ವರದಿ ನೀಡಿದ್ದರು.
ಈ ವರದಿಯ ಅನ್ವಯ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಅಮಾನತುಗೊಳಿಸಿದ್ದಾರೆ. ಇತರ ನ್ಯಾಯ ಬೆಲೆ ಅಂಗಡಿಯವರು ಸರ್ಕಾರ ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಚೀಟಿದಾರರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಕ್ರಮ ಖಚಿತ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.