ADVERTISEMENT

ಸತ್ತಿಗೇರಿ | ಸಾಲಬಾಧೆ: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2023, 15:38 IST
Last Updated 4 ನವೆಂಬರ್ 2023, 15:38 IST
ಈರಣ್ಣಾ ಶ್ರೀಶೈಲಪ್ಪ ಪಟ್ಟಣಶೆಟ್ಟಿ
ಈರಣ್ಣಾ ಶ್ರೀಶೈಲಪ್ಪ ಪಟ್ಟಣಶೆಟ್ಟಿ   

ಸತ್ತಿಗೇರಿ: ಸಾಲಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸತ್ತಿಗೇರಿಯಲ್ಲಿ ಶುಕ್ರವಾರ ನಡೆದಿದೆ.

ಈರಣ್ಣಾ ಶ್ರೀಶೈಲಪ್ಪ ಪಟ್ಟಣಶೆಟ್ಟಿ (29) ಮೃತರು. ಅವರು ಬ್ಯಾಂಕ್‌ ಮತ್ತು ಪ್ರಾಥಮಿಕ ಕೃಷಿಪತ್ತಿನ ಸಂಘದಲ್ಲಿ ಸಾಲ ಪಡೆದಿದ್ದರು. ಮಳೆ ಕೊರತೆಯಿಂದಾಗಿ ಬೆಳೆ ಕೈಕೊಟ್ಟಿದ್ದರಿಂದ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.