ADVERTISEMENT

ಬೆಳಗಾವಿ | ರೈತರ ದಿನಾಚರಣೆ, ಸನ್ಮಾನ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2021, 12:04 IST
Last Updated 23 ಡಿಸೆಂಬರ್ 2021, 12:04 IST
ಬೆಳಗಾವಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಗುರುವಾರ ನಡೆದ ರೈತರ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಧಕ ರೈತರನ್ನು ಸತ್ಕರಿಸಲಾಯಿತು
ಬೆಳಗಾವಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಗುರುವಾರ ನಡೆದ ರೈತರ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಧಕ ರೈತರನ್ನು ಸತ್ಕರಿಸಲಾಯಿತು   

ಬೆಳಗಾವಿ: ಕೃಷಿ ಇಲಾಖೆ ವತಿಯಿಂದ ರಾಷ್ಟ್ರೀಯ ರೈತರ ದಿನಾಚರಣೆ ಕಾರ್ಯಕ್ರಮ ಮತ್ತು ಕಿಸಾನ್‌ ಗೋಷ್ಠಿಯನ್ನು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿತ್ತು.

ಹುಕ್ಕೇರಿ ತಾಲ್ಲೂಕು ಸಂಕೇಶ್ವರದ ಕೃಷಿ ಸಂಶೋಧನಾ ಕೇಂದ್ರದ ವಿಜ್ಞಾನಿ ಡಾ.ಎಸ್.ಎಸ್. ನೂಲಿ ಉದ್ಘಾಟಿಸಿದರು. ‘ಕಬ್ಬಿನ ಬೇಸಾಯದಲ್ಲಿ ಇತ್ತೀಚಿನ ಬೆಳವಣಿಗೆಗಳು ಹಾಗೂ ಅಧಿಕ ಇಳುವರಿಯ ತಾಂತ್ರಿಕತೆಗಳ’ ವಿಷಯ ಕುರಿತು ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕೃಷಿ ಅಧಿಕಾರಿ ಮನೋಹರಗೌಡ ಎಸ್. ಅವರು ರೈತರ ದಿನದ ಔಚಿತ್ಯವನ್ನು ತಿಳಿಸಿದರು.

ADVERTISEMENT

ತಾಲ್ಲೂಕಿನ ಎಂಟು ಸಾಧಕ ರೈತರು ಮತ್ತು ರೈತ ಮಹಿಳೆಯನ್ನು ಸನ್ಮಾನಿಸಲಾಯಿತು. ಕೃಷಿ ಅಧಿಕಾರಿ ಮಂಗಳಾ ಬಿರಾದಾರ, ಸಹಾಯಕ ತೋಟಗಾರಿಕಾ ಅಧಿಕಾರಿ ಪಟ್ಟಣಶೆಟ್ಟಿ, ಆತ್ಮ ಯೋಜನೆಯ ಉಪ ಯೋಜನಾ ನಿರ್ದೇಶಕ ಎಂ.ಸಿ. ಮಠದ, ಸಹಾಯಕ ತಾಂತ್ರಿಕ ವ್ಯವಸ್ಧಾಪಕ ಮಂಜುನಾಥ ಹಕ್ಕಲದವರ, ರೈತರಾದ ಬಸವರಾಜ ಡೊಂಗರಗಾವಿ, ಪಿರಾಜಿ ಮಾಹುತ, ರಮೇಶ ವಾಲಿ, ಸಂಜೀವ ಡೊಂಗರಗಾವಿ ಪಾಲ್ಗೊಂಡಿದ್ದರು.

ಕೃಷಿ ಇಲಾಖೆಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕಿ ಸವಿತಾ ಪರೀಟ ನಿರೂಪಿಸಿದರು. ಮಲ್ಲೇಶ ನಾಯಿಕ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.