ADVERTISEMENT

ಬೆಳಗಾವಿ| ಮುಖ್ಯಮಂತ್ರಿ ಯಡಿಯೂರಪ್ಪಗೆ ರೈತ ಮುಖಂಡರ ಘೇರಾವ್ ಯತ್ನ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2019, 5:01 IST
Last Updated 4 ಅಕ್ಟೋಬರ್ 2019, 5:01 IST
ಮುಖ್ಯಮಂತ್ರಿಗೆ ಘೇರಾವ್ ಹಾಕಲು ಮುಂದಾದ ರೈತ ಮುಖಂಡರು
ಮುಖ್ಯಮಂತ್ರಿಗೆ ಘೇರಾವ್ ಹಾಕಲು ಮುಂದಾದ ರೈತ ಮುಖಂಡರು   

ಬೆಳಗಾವಿ: ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆಘೇರಾವ್ ಹಾಕಲು ಮುಂದಾದ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.

ಇಲ್ಲಿನ ಅತಿಥಿ ಗೃಹದಿಂದ ತೆರಳುತ್ತಿದ್ದ ಮುಖ್ಯಮಂತ್ರಿ ವಿರುದ್ಧ ಘೋಷಣೆ ಕೂಗುತ್ತಿದ್ದರು. ಮುಖ್ಯಮಂತ್ರಿ ಕಾರಿನಿಂದ ಇಳಿದು ತಮ್ಮಿಂದ ಮನವಿ ಸ್ವೀಕರಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ರಸ್ತೆಯಲ್ಲಿ ಮಲಗಿ ಪ್ರತಿಭಟನೆಗೆ ಮುಂದಾದ ರೈತ ಮಹಿಳೆ ಜಯಶ್ರೀ ಗುರಣ್ಣವರ ಮೊದಲಾದವರನ್ನು ಪೊಲೀಸರು ಎಳೆದಾಡಿದರು. ರಸ್ತೆ ಬದಿಗೆ ತಂದು ಬಿಟ್ಟರು.

ರೈತರ ಮಗ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ನಮ್ಮಿಂದ ಮನವಿ ಸ್ವೀಕರಿಸಿ ಅಹವಾಲು ಆಲಿಸುವ ಕಾಳಜಿ ತೋರಿಸಬೇಕಿತ್ತು. ನಿನ್ನೆ ಮನವಿ ಕೊಡಲು ಹೋದಾಗಲೂ ನೀವು ಹೇಳಿದಷ್ಟು ಪರಿಹಾರ ಕೊಡಲಾಗದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕೂಡ ರೇಗಾಡಿದರು. ಹೀಗಾದರೆ ಹೇಗೆ? ಸರ್ಕಾರದ ಬಳಿ ಹಣ ಇಲ್ಲವಾದರೆ ಸಂತ್ರಸ್ತರನ್ನು ಭೇಟಿಯಾಗುವ ನಾಟಕವನ್ನೇಕೆ ಮಾಡುತ್ತಿದ್ದಾರೆ ಎಂದು ಜಯಶ್ರೀ ಕೇಳಿದರು.

ಇದಕ್ಕೂ ಮುನ್ನ ಅತಿಥಿಗೃಹದ ಆವರಣದಲ್ಲಿ ಮನವಿ ಸಲ್ಲಿಸಿದ ರೈತ ಮುಖಂಡರ ಇನ್ನೊಂದು ಗುಂಪು ಸಮರ್ಪಕವಾಗಿ ಪರಿಹಾರ ನೀಡುವಂತೆ ಆಗ್ರಹಿಸಿತು. ಪರಿಹಾರಕ್ಕಾಗಿ ಘೋಷಣೆ ಕೂಗಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.