ADVERTISEMENT

ಪ್ರಾಮಾಣಿಕ ಅಧಿಕಾರಿ ಮೇಲೆ ಕ್ರಮವಾಗದಿರಲಿ: ರೈತ ಸಂಘಟನೆಗಳ ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಜುಲೈ 2024, 14:22 IST
Last Updated 22 ಜುಲೈ 2024, 14:22 IST
ಬೆಳಗಾವಿಯಲ್ಲಿ ರಾಷ್ಟ್ರೀಯ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು
ಬೆಳಗಾವಿಯಲ್ಲಿ ರಾಷ್ಟ್ರೀಯ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು    

ಬೆಳಗಾವಿ: ‘ವಿವಿಧ ರೈತ ಸಂಘಟನೆಯವರು ಭೂದಾಖಲೆಗಳ ಇಲಾಖೆ ಬೆಳಗಾವಿ ಉಪನಿರ್ದೇಶಕರಿಗೆ ತೊಂದರೆ ನೀಡುತ್ತಿದ್ದಾರೆ. ಆದರೆ, ಪ್ರಾಮಾಣಿಕ ಅಧಿಕಾರಿಗೆ ಯಾವ ತೊಂದರೆಯಾಗದಂತೆ ಕ್ರಮ ವಹಿಸಬೇಕು’ ಎಂದು ಆಗ್ರಹಿಸಿ ರಾಷ್ಟ್ರೀಯ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಸೋಮವಾರ ಮನವಿ ಸಲ್ಲಿಸಿದರು.

‘ಭೂದಾಖಲೆಗಳ ಇಲಾಖೆ ಉಪನಿರ್ದೇಶಕರು ನಿಯಮಾನುಸಾರ ಕೆಲಸ ಮಾಡುತ್ತಿದ್ದಾರೆ. ಹಲವು ಪ್ರಕರಣಗಳ ವಿಚಾರಣೆ ನಡೆಸಿ, ರೈತರಿಗೆ ಅನ್ಯಾಯವಾಗದಂತೆ ಕ್ರಮ ವಹಿಸಿದ್ದಾರೆ. ಅಂಥವರ ವಿರುದ್ಧ ದುರುದ್ದೇಶದಿಂದ ಪ್ರತಿಭಟನೆ ನಡೆಸುವುದು ಸರಿಯಲ್ಲ’ ಎಂದರು.

ಮುಖಂಡರಾದ ಚೂನಪ್ಪ ಪೂಜೇರಿ, ಗುರುನಾಥ ಹುಕ್ಕೇರಿ, ಕುಮಾರ ಮರದಿ, ಮಹೇಶ ಸುಬೇದಾರ, ಶಶಿಕಾಂತ ಪಡಸಲಗಿ ಇತರರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.