ADVERTISEMENT

ಬೆಳಗಾವಿ: ಫಸಲ್ ಬಿಮಾ ಯೋಜನೆಯಡಿ ₹ 9.90 ಕೋಟಿ ಮಂಜೂರು

​ಪ್ರಜಾವಾಣಿ ವಾರ್ತೆ
Published 22 ಜುಲೈ 2019, 10:53 IST
Last Updated 22 ಜುಲೈ 2019, 10:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 2018ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ 47,224 ರೈತರು ಪಾಲ್ಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.

‘ಬೆಳೆ ಕಟಾವು ಪ್ರಯೋಗಗಳ ಆಧಾರದ ಮೇಲೆ ವಿಮೆ ಪರಿಹಾರ ಮೊತ್ತದ ಲೆಕ್ಕಾಚಾರ ಮಾಡಿದ ನಂತರ, ಈ ಹಂಗಾಮಿಗೆ 9,761 ರೈತರಿಗೆ ಒಟ್ಟು ₹ 9.90 ಕೋಟಿ ವಿಮೆ ಪರಿಹಾರ ಮಂಜೂರಾಗಿದೆ. ಅದರ ಪೈಕಿ ಈಗಾಗಲೇ 6,739 ರೈತರಿಗೆ ₹ 7.57 ಕೋಟಿ ವಿಮೆ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಿದೆ. ಇನ್ನುಳಿದ ರೈತರಿಗೆ ವಿಮಾ ಕಂಪನಿಯಿಂದ ಪರಿಹಾರ ಜಮಾ ಮಾಡುವ ಕಾರ್ಯ ಪ್ರಗತಿಯಲ್ಲಿದೆ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT