ಬೆಳಗಾವಿ: ಇಲ್ಲಿ ಖಡೇಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಪಾಟೀಲ ಮಾಳದಲ್ಲಿ ತಂದೆಯನ್ನು ಚಾಕುವಿನಿಂದ ಇರಿದು ಕೊಂದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಕೊತ್ವಾಲ ಗಲ್ಲಿಯ ನಿವಾಸಿ ಸೋಮನಾಥ ಲಕ್ಷ್ಮಣ ಶಿರೂರ ಬಂಧಿತ ಆರೋಪಿ. ತಂದೆ ಲಕ್ಷ್ಮಣ ಲಕ್ಕಪ್ಪ ಶಿರೂರ ಅವರನ್ನು ಕೊಂದ ಆರೋಪ ಅವರ ಮೇಲಿದೆ. ‘ಅವರು ಹಣ ಕೊಡು, ಆಸ್ತಿಯಲ್ಲಿ ಪಾಲು ಕೊಡು ಎಂದು ಆಗಾಗ ಒತ್ತಾಯಿಸುತ್ತಿದ್ದರು. ಇದೇ ವಿಚಾರವಾಗಿ ಮಾರ್ಚ್ 4ರಂದು ಸಂಜೆ 4.30ರ ಸಮಯದಲ್ಲಿ ತಂದೆಯ ಎದೆಯ ಕೆಳ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಬಗ್ಗೆ ದೂರು ದಾಖಲಾಗಿತ್ತು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇನ್ಸ್ಪೆಕ್ಟರ್ ಡಿ.ಬಿ. ಶಿಂಧೆ ಹಾಗೂ ಅವರ ತಂಡ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.