ಬೆಳಗಾವಿ: ಇಲ್ಲಿನ ಸಮರ್ಥನಂ ದೃಷ್ಟಿದೋಷವುಳ್ಳವರ ಸೇವಾ ಸಂಸ್ಥೆಯ ವತಿಯಿಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರನ್ನು ದೆಹಯಲಿಯಲ್ಲಿ ಸನ್ಮಾನಿಸಲಾಯಿತು.
ಸಂಸ್ಥಾಪಕ ಮಹಾಂತೇಶ ಕಿವಡಸಣ್ಣವರ ಮತ್ತು ಗೌರವ ನಿರ್ದೇಶಕ ವೀರೇಶ ಕಿವಡಸಣ್ಣವರ, ಸಂಸ್ಥೆಯ ಕುರಿತು ಸಮಗ್ರ ಮಾಹಿತಿ ನೀಡಿದರು.
ಕಾರ್ಯವೈಖರಿ ಕುರಿತು ಸಂತಸ ವ್ಯಕ್ತಪಡಿಸಿದ ಸಂತೋಷ್, ಸಂಸ್ಥೆಗೆ ಎಲ್ಲ ರೀತಿಯ ನೆರವು ಒದಗಿಸುವುದಾಗಿ ಭರವಸೆ ನೀಡಿದರು.
ಇದೇ ವೇಳೆ ಮಹಾಂತೇಶ ತಮ್ಮ ಬಯೋಗ್ರಫಿಯನ್ನು ನೀಡಿದರು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.