ADVERTISEMENT

ನಡುಗಡ್ಡೆಯಾದ ಜನವಸತಿ: ಜನ, ಜಾನುವಾರು ಸ್ಥಳಾಂತರ

​ಪ್ರಜಾವಾಣಿ ವಾರ್ತೆ
Published 24 ಜುಲೈ 2024, 16:08 IST
Last Updated 24 ಜುಲೈ 2024, 16:08 IST
ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಹುಲಗಬಾಳಿಯ ಮಾಂಗ ವಸತಿ ಪ್ರದೇಶದಿಂದ ಬುಧವಾರ ದನ– ಕರುಗಳನ್ನ ನದಿಯಲ್ಲಿ ಈಜಿಕೊಂಡು ದಾಟಿಸಿದ ರೈತ
ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಹುಲಗಬಾಳಿಯ ಮಾಂಗ ವಸತಿ ಪ್ರದೇಶದಿಂದ ಬುಧವಾರ ದನ– ಕರುಗಳನ್ನ ನದಿಯಲ್ಲಿ ಈಜಿಕೊಂಡು ದಾಟಿಸಿದ ರೈತ   

ಅಥಣಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಹುಲಗಬಾಳಿ ಗ್ರಾಮದ ವ್ಯಾಪ್ತಿಯ ಮಾಂಗ ಜನವಸತಿ ಪ್ರದೇಶವನ್ನು ಕೃಷ್ಣಾ ನದಿ ನೀರು ಸುತ್ತುವರಿದಿದ್ದು, 50 ಕುಟುಂಬಗಳು ನಡುಗಡ್ಡೆಯಲ್ಲಿ ಸಿಲುಕಿವೆ. ಅಲ್ಲಿನ ಜನ ಮತ್ತು ಜಾನುವಾರುಗಳನ್ನು ಬುಧವಾರ ಸಂಜೆ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಸಂತ್ರಸ್ತರಿಗೆ ಹುಲುಗಬಾಳಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾತ್ಕಾಲಿಕ ಪುನರ್ವಸತಿ ಕೇಂದ್ರ ಸ್ಥಾಪಿಸಲಾಗಿದೆ.

ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ ವೇಳೆ ಆಕ್ರೋಶಗೊಂಡ ಜನ, ‘ನಮಗೆ ಶಾಶ್ವತ ನೆಲೆ ಕಲ್ಪಿಸಬೇಕು. ಪ್ರತಿ ವರ್ಷ ತಾತ್ಕಾಲಿಕ ಸ್ಥಳಾಂತರ ಬೇಡ. ಅಲ್ಲಿಯವರೆಗೆ ಸ್ಥಳದಿಂದ ಕದಲುವುದಿಲ್ಲ’ ಎಂದು ಪಟ್ಟು ಹಿಡಿದರು. ಅವರನ್ನು ಸಮಾಧಾನಪಡಿಸಿದ ಅಧಿಕಾರಿಗಳು, ‘ಸಮಸ್ಯೆಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು. ಸದ್ಯ ಅಪಾಯದ ಮಟ್ಟವಿದೆ. ಸುರಕ್ಷಿತ ಸ್ಥಳದಲ್ಲಿ ವ್ಯವಸ್ಥೆ ಮಾಡಲಾಗಿದೆ’ ಎಂದರು.

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಹುಲಗಬಾಳಿಯ ಮಾಂಗ ವಸತಿ ಪ್ರದೇಶದಿಂದ ಜನರು ಬುಧವಾರ ಸುರಕ್ಷಿತ ಸ್ಥಳಕ್ಕೆ ತೆರಳಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT