ADVERTISEMENT

ಪೌರಕಾರ್ಮಿಕರೊಂದಿಗೆ ಉಪಾಹಾರ ಸೇವಿಸಿ ಗೌರವ ಸೂಚಿಸಿದ ಶಾಸಕ

​ಪ್ರಜಾವಾಣಿ ವಾರ್ತೆ
Published 26 ಮೇ 2020, 7:34 IST
Last Updated 26 ಮೇ 2020, 7:34 IST
ಶಾಸಕ ಅಭಯ ಪಾಟೀಲ ಅವರು ಪೌರಕಾರ್ಮಿಕರಿಗೆ ಉಪಾಹಾರ ವಿತರಿಸಿದರು
ಶಾಸಕ ಅಭಯ ಪಾಟೀಲ ಅವರು ಪೌರಕಾರ್ಮಿಕರಿಗೆ ಉಪಾಹಾರ ವಿತರಿಸಿದರು   

ಬೆಳಗಾವಿ: ಇಲ್ಲಿನ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ತಮ್ಮ ಕ್ಷೇತ್ರದಲ್ಲಿ ಕೊರೊನಾ ಭೀತಿಯ ನಡುವೆಯೂ ಕೆಲಸ ಮಾಡುತ್ತಿರುವ ಪೌರಕಾರ್ಮಿಕರೊಂದಿಗೆ ಮಂಗಳವಾರ ಉಪಾಹಾರ ಸೇವಿಸಿ, ಅವರಿಗೆ ದಿನಸಿ ಕಿಟ್ ವಿತರಿಸಿ ಗೌರವ ಸೂಚಿಸಿದರು.

ಹಿಂದವಾಡಿಯ ಮಹಾವೀರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ಪೌರಕಾರ್ಮಿಕರು ಕೊರೊನಾ ಯೋಧರೆ ಸರಿ. ನಗರವನ್ನು ಸ್ವಚ್ಛವಾಗಿಡುವ ಮೂಲಕ ಹೆಚ್ಚಿನ ರೀತಿಯಲ್ಲಿ ಕೊರೊನಾ ಸೋಂಕು ಹರಡದಂತೆ ನೋಡಿಕೊಳ್ಳುವಲ್ಲಿ ಪಾತ್ರ ವಹಿಸಿದ್ದಾರೆ. ಅವರಿಗೆ ಗೌರವ ಸೂಚಿಸುವುದು ನಮ್ಮ ಕರ್ತವ್ಯವಾಗಿದೆ' ಎಂದರು.

ಕಾರ್ಮಿಕ ಇಲಾಖೆಯಿಂದ ಕ್ಷೇತ್ರದಲ್ಲಿನ ಕಟ್ಟಡ ಕಾರ್ಮಿಕರಿಗಾಗಿ 5,000 ಆಹಾರಧಾನ್ಯದ ಕಿಟ್‌ಗಳು ಮಂಜೂರಾಗಿವೆ. ಮೂರ್ನಾಲ್ಕು ದಿನಗಳಲ್ಲಿ ಅವುಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ADVERTISEMENT

600 ಪೌರಕಾರ್ಮಿಕರಿಗೆ ಕಿಟ್ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.