ADVERTISEMENT

ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಿಸಿ ಈದ್ ಆಚರಣೆ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2020, 4:20 IST
Last Updated 31 ಅಕ್ಟೋಬರ್ 2020, 4:20 IST
ಬೈಲಹೊಂಗಲದಲ್ಲಿ ಅಖಿಲ ಭಾರತ ಮುಸ್ಲಿಂ ಅಭಿವೃದ್ಧಿ ವೇದಿಕೆಯಿಂದ ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಿಸಿ ಶುಕ್ರವಾರ ಈದ್ ಮಿಲಾದ್ ಹಬ್ಬ ಆಚರಿಸಲಾಯಿತು
ಬೈಲಹೊಂಗಲದಲ್ಲಿ ಅಖಿಲ ಭಾರತ ಮುಸ್ಲಿಂ ಅಭಿವೃದ್ಧಿ ವೇದಿಕೆಯಿಂದ ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಿಸಿ ಶುಕ್ರವಾರ ಈದ್ ಮಿಲಾದ್ ಹಬ್ಬ ಆಚರಿಸಲಾಯಿತು   

ಬೈಲಹೊಂಗಲ: ಪಟ್ಟಣದಲ್ಲಿ ಅಖಿಲ ಭಾರತ ಮುಸ್ಲಿಂ ಅಭಿವೃದ್ಧಿ ವೇದಿಕೆಯಿಂದ ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಿಸಿ ಈದ್ ಮಿಲಾದ್ ಹಬ್ಬವನ್ನು ಶುಕ್ರವಾರ ಸರಳವಾಗಿ ಆಚರಿಸಲಾಯಿತು. ಎಲ್ಲಾ ಸಮುದಾಯದ ಅರ್ಹ ಬಡ, ವಿಧವಾ ಕುಟುಂಬಗಳಿಗೆ ದಿನ ಬಳಕೆಗೆ ಅಗತ್ಯವಿರುವ ಆಹಾರ ಸಾಮಗ್ರಿಗಳನ್ನು ಮನೆ, ಮನೆಗೆ ತೆರಳಿ ವಿತರಿಸಲಾಯಿತು.

ಸಂಘಟನೆ ಸಂಸ್ಥಾಪಕ ಸದಸ್ಯ ನಜೀರಅಹ್ಮದ್ ಮುಲ್ಲಾ ಮಾತನಾಡಿ, 'ಜಗತ್ತಿನ ಎಲ್ಲಾ ಕಡೆಗಳಲ್ಲೂ ಆಯಾ ಪ್ರದೇಶದ ಸಮಯಕ್ಕೆ ಹೊಂದಿಕೊಂಡು ಈದ್ ಮಿಲಾದ್ ಹಬ್ಬ ಆಚರಿಸಲಾಗುತ್ತದೆ. ಈ ವರ್ಷ ಸರಳವಾಗಿ ಹಬ್ಬ ನಡೆಸಲಾಗುತ್ತಿದೆ. ಜಗತ್ತಿಗೆ ಅಂಟಿಕೊಂಡಿರುವ ಕೊರೊನಾ ನಿರ್ಮೂಲನೆ ಜೊತೆಗೆ ಸಮೃದ್ಧ ಭಾರತ ನಿರ್ಮಾಣದ ಕನಸು ನನಸಾಗಲು ಎಲ್ಲರು ಶ್ರದ್ಧೆ, ಭಕ್ತಿಯಿಂದ ಕಾಯಕ ಮಾಡಿ ಎಂದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಅಲಂಅಲಿ ಕಾರೆಖಾಜಿ, ಮೌಲಾನಾ ಮುದಸ್ಸಿರ ತಿಗಡಿ, ಹಾಫೀಝ್ ಇಸಾಕ್, ಮೊಹಿನ ಮುಲ್ಲಾ, ಸಂಘಟನೆ ಸದಸ್ಯರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.