ಖಾನಾಪುರ: ತಾಲ್ಲೂಕಿನ ಕಣಕುಂಬಿ ಅರಣ್ಯದಲ್ಲಿ ಸೋಮವಾರ ಬೆಳಿಗ್ಗೆಯಿಂದ ಮಂಗಳವಾರ ಬೆಳಿಗ್ಗೆಯವರೆಗೆ 13 ಸೆಂ.ಮೀ. ಮಳೆಯಾಗಿದೆ.
ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಮಲಪ್ರಭಾ, ಪಾಂಡರಿ ಮತ್ತು ಮಹದಾಯಿ ನದಿಗಳಲ್ಲಿ ನೀರಿನ ಹರಿವು ಹೆಚ್ಚಿದೆ.
ಹಬ್ಬನಹಟ್ಟಿಯ ಆಂಜನೇಯ ದೇವಾಲಯ ಮಲಪ್ರಭಾ ನದಿಯಲ್ಲಿ ಬಹುತೇಕ ಮುಳುಗಡೆಯಾಗಿದೆ.
ಸತತ ಮಳೆಯ ಕಾರಣ ಕಾನನದಂಚಿನ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.