ADVERTISEMENT

ಬೆಳಗಾವಿ: ಪ್ರತ್ಯೇಕ ಅಪಘಾತ, ನಾಲ್ವರು ಸಾವು

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2019, 14:02 IST
Last Updated 8 ಡಿಸೆಂಬರ್ 2019, 14:02 IST
   

ಬೆಳಗಾವಿ: ತಾಲ್ಲೂಕಿನಲ್ಲಿ ಶನಿವಾರ ತಡರಾತ್ರಿ ನಡೆದ ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಮೃತರಾದರು.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಬರ್ಡೇ ಹೋಟೆಲ್ ಸಮೀಪ ಶನಿವಾರ ತಡರಾತ್ರಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ‌ ಮೂವರು ಸ್ಥಳದಲ್ಲೇ ಮೃತಪಟ್ಟರು.

ತಾಲ್ಲೂಕಿನ ಕೇದನೂರ ಗ್ರಾಮದ ಸಂಜು ರಾಜಾಯಿ (29), ಪ್ರಕಾಶ ಚಂಡಕೆ (27) ಅಡಿವೆಪ್ಪ ಗುಜ್ಜನವರ (29) ಮೃತರು. ಅವರು ಖಾನಾಪುರ ತಾಲ್ಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಕೂಲಿ ಕೆಲಸಕ್ಕೆ ಹೋಗಿ ವಾಪಸಾಗುತ್ತಿದ್ದರು.

ADVERTISEMENT

ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಊಟಕ್ಕೆ ಹೋಗುವಾಗ ಅಪಘಾತ

ದ್ವಿಚಕ್ರವಾಹನದಲ್ಲಿ ಹೊನಗಾದ ದಾಭಾಗೆ ಶನಿವಾರ ತಡರಾತ್ರಿ ಊಟಕ್ಕೆಂದು ತೆರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿಒಬ್ಬ ವಿದ್ಯಾರ್ಥಿ ಮೃತಪಟ್ಟು, ಇನ್ನೊಬ್ಬರು ಗಾಯಗೊಂಡಿದ್ದಾರೆ.

ಗೋಕಾಕ ತಾಲ್ಲೂಕಿನ ಘಟಪ್ರಭಾ ಬಳಿಯ ಧೂಪದಾಳದ ಅಕ್ಷಯ ಹುಂಡೇ‌ಕರ (23) ಮೃತ. ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಸಮೀಪದ ಕೇಸ್ತಿ ನಿವಾಸಿ ಸಚಿನ ಕುಲಕರ್ಣಿ (23) ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಬ್ಬರೂ ಖಾಸಗಿ ಕಾಲೇಜಿನಲ್ಲಿ ಎಂಬಿಒ ವಿದ್ಯಾರ್ಥಿಗಳು. ಕಾಕತಿ ಠಾಣೆ ಇನ್‌ಸ್ಪೆಕ್ಟರ್‌ ಶ್ರೀಶೈಲ ಕೌಜಲಗಿ ಸ್ಥಳಕ್ಕೆ ಭೇಟಿ ನೀಡಿದ್ದರು. ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.