
ಬೆಳಗಾವಿ: ಜಗದೀಶ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭೆ ಟಿಕೆಟ್ ಸಿಗಲಿದೆ ಎಂಬ ಸುದ್ದಿ ದಟ್ಟವಾಗಿರುವ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಹಾಂತೇಶ ಕವಟಗಿಮಠ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ‘ಗೋ ಬ್ಯಾಕ್ ಶೆಟ್ಟರ್’ ಅಭಿಯಾನ ಆರಂಭಿಸಿದ್ದಾರೆ.
‘ಪಕ್ಷದಿಂದ ಪಕ್ಷಕ್ಕೆ ಹಾರುವ ಶೆಟ್ಟರ್ ನಮಗೆ ಬ್ಯಾಡ; ಮಹಾಂತೇಶ ಕವಟಗಿಮಠ ಅವರೇ ನಮ್ಮ ನಾಯಕ ನೋಡ’, ‘ಸ್ಥಳೀಯ ನಾಯಕರೇ ನಮಗೆ ಹಿತ; ಅವರಿಗೇ ನಮ್ಮ ಮತ’ ಮತ್ತು ‘ಅಧಿಕಾರಕ್ಕಾಗಿ ಪಕ್ಷ ಬಿಟ್ಟವರಿಗೆ ಕ್ಷೇತ್ರ ಬಿಡುವುದು ದೊಡ್ಡದಲ್ಲ’ ಎಂಬ ಅಡಿಬರಹಗಳನ್ನು ಫೇಸ್ಬುಕ್, ಇನ್ಸ್ಟಾಗ್ರಾಂ ಹಾಗೂ ವಾಟ್ಸ್ಆ್ಯಪ್ ಮೂಲಕ ಹರಿಬಿಟ್ಟಿದ್ದಾರೆ.
ಶೆಟ್ಟರ್ ಅವರು ‘ಹಸ್ತ’ದ ಪೇಂಟಿಂಗ್ ಮಾಡುತ್ತಿರುವ ವ್ಯಂಗ್ಯಚಿತ್ರಗಳನ್ನೂ ಜಾಲತಾಣಗಳಲ್ಲಿ ಹರಿಬಿಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.