ಗೋಕಾಕ: ನಗರಸಭೆ ಹಾಲಿ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಎಸ್.ಎ. ಕೋತ್ವಾಲ್ (61) ಭಾನುವಾರ ನಿಧನರಾದರು.
ಅನಾರೋಗ್ಯದಿಂದಾಗಿ ಮೂರು ವಾರಗಳಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅವರಿಗೆ ಪತ್ನಿ, ಸಹೋದರರು ಇದ್ದಾರೆ.
ಕೋತ್ವಾಲ್ ಇಲ್ಲಿನ ತಂಜೀಮ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಈ ಹಿಂದಿನ 2 ಅವಧಿಗೆ ಅಧ್ಯಕ್ಷರಾಗಿದ್ದರು. ಸತತ 6 ಬಾರಿ ನಗರಸಭೆ ಸದಸ್ಯರಾಗಿದ್ದರು. ಎರಡು ಅವಧಿಗೆ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಗ್ರಾಮ ದೇವತೆಯರ ಜಾತ್ರಾ ಸಮಿತಿಯ ಆಡಳಿತ ಮಂಡಳಿಯ ಸದಸ್ಯರೂ ಆಗಿದ್ದರು. ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಆಪ್ತರಾಗಿದ್ದರು.
ಶ್ರದ್ಧಾಂಜಲಿ: ಇಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಗೃಹ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಈ ವೇಳೆ ಸ್ನೇಹಿತನನ್ನು ನೆನೆದು ಸಚಿವರು ಕಣ್ಣೀರಿಟ್ಟರು.
ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.