ADVERTISEMENT

ಗೋಕಾಕ ಜಿಲ್ಲೆಗೆ ಆಗ್ರಹ | ಜಾರಕಿಹೊಳಿ ಸಹೋದರರು ಆಸಕ್ತಿ ವಹಿಸಿ: ಬಸಗೌಡ ಪಾಟೀಲ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2025, 3:07 IST
Last Updated 4 ಡಿಸೆಂಬರ್ 2025, 3:07 IST
ನೂತನ ಗೋಕಾಕ ಜಿಲ್ಲೆ ರಚನೆಗೆ ಆಗ್ರಹಿಸಿ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದ ವರೆಗೆ ವಕೀಲರ ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳ ನೇತೃತ್ವದಲ್ಲಿ ಮೆರವಣಿಗೆ ನಡೆಯಿತು
ನೂತನ ಗೋಕಾಕ ಜಿಲ್ಲೆ ರಚನೆಗೆ ಆಗ್ರಹಿಸಿ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದ ವರೆಗೆ ವಕೀಲರ ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳ ನೇತೃತ್ವದಲ್ಲಿ ಮೆರವಣಿಗೆ ನಡೆಯಿತು   

ಗೋಕಾಕ: ನೂತನ ಗೋಕಾಕ ಜಿಲ್ಲೆ ರಚನೆ ಮಾಡುವಂತೆ ಆಗ್ರಹಿಸಿ ಗೋಕಾಕ ಜಿಲ್ಲಾ ಹೋರಾಟ ಚಾಲನಾ ಸಮಿತಿ ಹಾಗೂ ವಕೀಲರ ಸಂಘದ ನೇತೃತ್ವದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬುಧವಾರ ಮೆರವಣಿಗೆ ಆರಂಭಗೊಂಡು, ಬಸವೇಶ್ವರ ವೃತ್ತದಲ್ಲಿ ಪ್ರತಿಭಟನಕಾರರು ಧರಣಿ ನಡೆಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ ಮಾತನಾಡಿ, ‘ರಾಜ್ಯದಲ್ಲಿ ಆಡಳಿತ ನಡೆಸುವ ಸರ್ಕಾರ– ಮುಖ್ಯಮಂತ್ರಿಯನ್ನೇ ಬದಲಾಯಿಸುವ ಸಾಮರ್ಥ್ಯವುಳ್ಳ ಜಾರಕಿಹೊಳಿ ಸಾವುಕಾರರು ಗೋಕಾಕ ಜಿಲ್ಲಾ ಕೇಂದ್ರ ರಚನೆಯಲ್ಲಿ ಸಕಾರಾತ್ಮಕ ಪಾತ್ರ ವಹಿಸಬೇಕು’ ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಮುಖಂಡ ಮಹಾಂತೇಶ ಕಡಾಡಿ ಮಾತನಾಡಿ, ‘ಗೋಕಾಕ ಜನತೆಯ ಬಹು ನಿರೀಕ್ಷಿತ ಜಿಲ್ಲಾ ಕೇಂದ್ರ ಸ್ಥಾನಮಾನದ ಕನಸು ಈಡೇರಿಸಲು ಜಾರಕಿಹೊಳಿ ಸಹೋದರರು ಇನ್ನಷ್ಟು ಪರಿಶ್ರಮ ಪಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಮಾತನಾಡಿ, ‘ಗೋಕಾಕ ನೂತನ ಜಿಲ್ಲಾ ಕೇಂದ್ರ ಕನಸು ಈಡೇರುವ ದಿನಗಳು ದೂರವಿಲ್ಲ’ ಪ್ರತಿಭಟನಕಾರರನ್ನು ಸಂತೈಸಿದರು.

ಹೋರಾಟದ ಮುಂದಾಳತ್ವ ವಹಿಸಿದ್ದ ಶೂನ್ಯ ಸಂಪಾದನಮಠದ ಪೀಠಾಧಿಪತಿ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ‘ಸರ್ಕಾರವು ಗೋಕಾಕ ಜಿಲ್ಲೆಗೆ ಆಗ್ರಹಿಸುತ್ತಿರುವ ಹೋರಾಟಗಾರರಿಗೆ ಈ ಬಾರಿ ನ್ಯಾಯ ಒದಗಿಸಲಿ’ ಎಂದು ಆಶಿಸಿದರು.

ಬೈಲಹೊಂಗಲ ಉಪ ವಿಭಾಗಾಧಿಕಾರಿ ಅನಿಲ ಜೈನ್ ಅವರಿಗೆ ಮನವಿ ಸಲ್ಲಿಸಲಾಯಿತು.

ವಕೀಲರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಹೋರಾಟದಲ್ಲಿ ಭಾಗವಾಗಿದ್ದರು.

ಘಟಪ್ರಭಾದ ಶಿಕ್ಷಣ ಪ್ರೇಮಿ ರಾಮಣ್ಣ ಹುಕ್ಕೇರಿ ಮಾತನಾಡಿದರು. ವಕೀಲ ಶಂಕರ ಗೋರೋಶಿ ನಿರೂಪಿಸಿದರು.

ಚಿತ್ರ: 03ಜಿಕೆಕೆ2 ಗೋಕಾಕ ಬಸವೇಶ್ವರ ವೃತ್ತದಲ್ಲಿ ಮಂಗಳವಾರ ಗೋಕಾಕ ನೂತನ ಜಿಲ್ಲೆಗೆ ಆಗ್ರಹಿಸಿ ನಡೆದ ಧರಣಿ ಮತ್ತು ಹೋರಾಟದಲ್ಲಿ ಪಾಲ್ಗೊಂಡಿದ್ದ ಜನಸ್ತೋಮ.
ಚಿತ್ರ: 03ಜಿಕೆಕೆ3 ಗೋಕಾಕ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನಾ ನಿರತ ನಾಗರಿಕರು ವಕೀಲರು ಮತ್ತು ಮಠಾಧೀಶರಿಂದ ಮನವಿ ಪತ್ರವನ್ನು ಬೈಲಹೊಂಗಲ ಉಪ-ವಿಭಾಗಾಧಿಕಾರಿ ಅನೀಲ ಜೈನ ಸ್ವೀಕರಿಸಿದರು. ಚಿತ್ರದಲ್ಲಿ ವಕೀಲರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜಿ. ಬಿ.ಪಾಟೀಲ ಅಶೋಕ ಪೂಜಾರಿ ಶೂನ್ಯ ಸಂಪಾದನಮಠದ ಪೀಠಾಧಿಪತಿ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಮತ್ತಿತರರು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.