ಗೋಕಾಕ: ಗೋಕಾಕ ವಿಧಾನ ಕ್ಷೇತ್ರದ ವಿವಿಧೆಡೆ ಕೈಗೆತ್ತಿಕೊಂಡ ₹2.85 ಕೋಟಿ ವೆಚ್ಚದ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಶುಕ್ರವಾರ ಚಾಲನೆ ನೀಡಿದರು.
ಮಾಲದಿನ್ನಿ ಗ್ರಾಮದಲ್ಲಿ ₹ 1 ಕೋಟಿ, ಉಪ್ಪಾರಹಟ್ಟಿ ಗ್ರಾಮದಲ್ಲಿ ₹ 75 ಲಕ್ಷ ಬೆಣಚಿನಮರಡಿಯಲ್ಲಿ ₹ 40 ಲಕ್ಷ, ಕೊಳವಿಯಲ್ಲಿ ₹ 70 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಪೂಜೆ ನೆರವೇರಿಸಿದರು.
ಶಾಸಕ ರಮೇಶ ಜಾರಕಿಹೊಳಿ ಅವರ ಶ್ರಮದಿಂದಾಗಿ ಈ ಅನುದಾನ ಮಂಜೂರಾಗಿದೆ ಎಂದು ಅಂಬಿರಾವ ತಿಳಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಡ್ಡೆಪ್ಪ ತೋಳಿನವರ, ಉಪ್ಪಾರಹಟ್ಟಿಯ ಸಿದ್ಧಾರೂಢ ಮಠದ ನಾಗೇಶ್ವರ ಸ್ವಾಮಿಜಿ, ಮಾಲದಿನ್ನಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮವ್ವ ಭರಮನ್ನವರ, ಹನಮಂತ ದುರ್ಗನ್ನವರ, ಹನಮಂತ ಖಿಚಡಿ, ಮಹಾದೇವ ಬಂಡಿ, ಮಹಾದೇವ ಸಿಂಗನ್ನವರ ಮೊದಲಾದವರು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.