ಗೋಕಾಕ: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದೀನ- ದಲಿತರ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ರಮೇಶ ಜಾರಕಿಹೊಳಿ ಕರೆ ನೀಡಿದರು.
ಗೃಹ ಕಚೇರಿಯಲ್ಲಿ ಈಚೆಗೆ ತಾಲ್ಲೂಕಿನ ಮಲ್ಲಾಪುರ ಪಿ,ಜಿ, ಪಟ್ಟಣ ಪಂಚಾಯಿತಿ ವ್ಯಾಪ್ತಿಯ 2021-22ನೇ ಸಾಲಿನ ವಾಜಪೇಯಿ ವಸತಿ ಯೋಜನೆ ಅಡಿಯಲ್ಲಿ 56 ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸಿ ಮಾತನಾಡಿದರು.
ಮುಖಂಡರಾದ ದೇವಪ್ಪ ದಳವಾಯಿ, ಪ್ರವೀಣ ಮಟಗಾರ, ನಾಗರಾಜ ಚಚಡಿ, ಮಲ್ಲಪ್ಪ ಕೋಳಿ, ಮಲ್ಲಪ್ಪ ತುಕ್ಕಾನಟ್ಟಿ, ಶೇಖರ ಕುಲಗೋಡ, ಮಾರುತಿ ಹುಕ್ಕೇರಿ, ಕೆಂಪಣ್ಣ ಚೌಕಶಿ, ಸಲೀಮ ಕಬ್ಬೂರ, ಇಮ್ರಾನ್ ಬಟಕುರ್ಕಿ, ಮಾರುತಿ ಹುಕ್ಕೇರಿ, ಲಕ್ಷ್ಮಣ ಮೇತ್ರಿ, ವಿಕ್ರಮ ದಳವಾಯಿ, ಸುನೀಲ ನಾಯಿಕ, ಮುಖ್ಯಾಧಿಕಾರಿ ಕೆ.ಬಿ.ಪಾಟೀಲ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.