ಅಥಣಿ: ‘ವಿವಿಧ ಸೇವೆಗಳನ್ನ ಪಡೆಯಲು ರೈತರು ಅಲೆದಾಡುವುದು, ಸಮಯ ವ್ಯರ್ಥವಾಗುವುದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರವು ಒಳ್ಳೆಯ ಯೋಜೆನೆಯನ್ನು ರೂಪಿಸಿದೆ. ಕಂದಾಯ ದಾಖಲೆಗಳನ್ನು ಮನೆಗಳಿಗೆ ನೇರವಾಗಿ ತಲುಪಿಸಲಿದೆ’ ಎಂದು ಶಾಸಕ ಮಹೇಶ ಕುಮಠಳ್ಳಿ ಹೇಳಿದರು.
ಸಮೀಪದ ದರೂರ ಹಾಗೂ ದೊಡವಾಡ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ, ಗ್ರಾಮ್ ಒನ್ ಕೇಂದ್ರ ಹಾಗೂ ಸತ್ತಿ ಗ್ರಾಮದಲ್ಲಿ ಮನೆ ಬಾಗಿಲಿಗೆ ಕಂದಾಯ ದಾಖಲೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮುಖಂಡರಾದ ರಮೇಶಗೌಡಾ ಪಾಟೀಲ, ಎ.ಎ. ಹುದ್ದಾರ, ಬಿ.ಟಿ. ಪಾಟೀಲ, ನಿಂಗಪ್ಪ ನಂದೇಶ್ವರ, ತಹಶೀಲ್ದಾರ್ ದುಂಡಪ್ಪ ಕೋಮಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.