ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೋರಗಲ್ ಗ್ರಾಮದ ವ್ಯಕ್ತಿಯು ವಿಷ ಸೇವಿಸಿ ನಾಲ್ವರು ಮಕ್ಕಳಿಗೂ ನೀಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಕಪ್ಪು ಶಿಲೀಂಧ್ರ ಸೋಂಕಿನಿಂದ ಪತ್ನಿ ಕಳೆದುಕೊಂಡಿದ್ದ ವ್ಯಕ್ತಿಯು ನಾಲ್ಕು ಮಕ್ಕಳಿಗೆ ವಿಷಪ್ರಾಶನ ಮಾಡಿ ಆತ್ಮಹತ್ಯೆಗೆ ಶರಣಾಗಿರುವುದು ಮನಕಲಕುತ್ತದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ.
ಓದಿ:ಬೆಳಗಾವಿಯಲ್ಲಿನಾಲ್ವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧ!
ಎಂತಹ ಪರಿಸ್ಥಿತಿಯಲ್ಲೂ ಧೈರ್ಯ ಕಳೆದುಕೊಂಡು ಪ್ರಾಣಕ್ಕೆ ಸಂಚಕಾರ ತಂದುಕೊಳ್ಳದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಮೃತ ವ್ಯಕ್ತಿಯು ನಿವೃತ್ತ ಯೋಧ ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.