ADVERTISEMENT

ಗುರುನಾಥಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 14:38 IST
Last Updated 25 ನವೆಂಬರ್ 2020, 14:38 IST
ಖಾನಾಪುರ ತಾಲ್ಲೂಕು ಹೆಬ್ಬಾಳ ಗ್ರಾಮದ ಗುರುನಾಥ ಮ. ಬಾಯನ್ನವರ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈಚೆಗೆ ಚಿನ್ನದ ಪದಕ ಪ್ರದಾನ ಮಾಡಿದರು
ಖಾನಾಪುರ ತಾಲ್ಲೂಕು ಹೆಬ್ಬಾಳ ಗ್ರಾಮದ ಗುರುನಾಥ ಮ. ಬಾಯನ್ನವರ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈಚೆಗೆ ಚಿನ್ನದ ಪದಕ ಪ್ರದಾನ ಮಾಡಿದರು   

ಉಳ್ಳಾಗಡ್ಡಿ ಖಾನಾಪುರ: ಉಪ ವಲಯ ಅರಣ್ಯ ಅಧಿಕಾರಿಯಾಗಿರುವಹುಕ್ಕೇರಿ ತಾಲ್ಲೂಕು ಹೆಬ್ಬಾಳ ಗ್ರಾಮದವರಾದ ಗುರುನಾಥ ಮ. ಬಾಯನ್ನವರ ‘ಮುಖ್ಯಮಂತ್ರಿ ಚಿನ್ನದ ಪದಕ’ಕ್ಕೆ ಭಾಜನರಾಗಿದ್ದಾರೆ.

ಈಚೆಗೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪದಕ ಪ್ರದಾನ ಮಾಡಿದರು.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಹೆಬ್ಬಾಳ ಮತ್ತು ಉನ್ನತ ಶಿಕ್ಷಣವನ್ನು ಸಂಕೇಶ್ವರದಲ್ಲಿ ಪಡೆದಿದ್ದಾರೆ. 1997ರಿಂದ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಲಾಖೆಯಲ್ಲಿ ಗಡಿ ಗುರುತಿಸುವಿಕೆ ಅರಣ್ಯ ಸಮೀಕ್ಷೆ ಸೇರಿದಂತೆ ಹಲವು ಕಾರ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿದ್ದಕ್ಕೆ ಪುರಸ್ಕಾರ ಸಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.