ADVERTISEMENT

ಹಾನಗಲ್ ಉಪ ಚುನಾವಣೆ ಫಲಿತಾಂಶ ಮರುಕಳಿಸಲಿದೆ: ಲಕ್ಷ್ಮಿ ಹೆಬ್ಬಾಳ್ಕರ್

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2021, 8:05 IST
Last Updated 10 ಡಿಸೆಂಬರ್ 2021, 8:05 IST
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್   

ಬೆಳಗಾವಿ: ಹಾನಗಲ್ಲ ಉಪಚುನಾವಣೆ ಫಲಿತಾಂಶ ಬೆಳಗಾವಿ ವಿಧಾನ ಪರಿಷತ್ ಚುನಾವಣೆಯಲ್ಲಿ ಮರುಕಳಿಸಲಿದೆ. ಕಾಂಗ್ರೆಸ್ ಅಭ್ಯರ್ಥಿಯಾದ ನನ್ನ ಸಹೋದರ ಚನ್ನರಾಜ ಹಟ್ಟಿಹೋಳಿ ಮೊದಲ ಸುತ್ತಿನಲ್ಲೇ ಗೆಲ್ಲಲಿದ್ದಾರೆ ಎಂದುಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಚುನಾವಣೆ ಎದುರಿಸಿದ್ದೇವೆ. 14 ತಾಲ್ಲೂಕುಗಳಲ್ಲಿ ನಮ್ಮ ಪಕ್ಷದ ಪರವಾಗಿ ಮತದಾರರಿದ್ದಾರೆ. ಗೆಲುವಿಗೆ ಬೇಕಿರುವ ಮತಗಳಿವೆ. ಒಳ್ಳೆಯ ವಾತಾವರಣವಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT