ADVERTISEMENT

ಸಂಸದನಾಗಿ ಪ್ರಾಮಾಣಿಕ ಕೆಲಸ ಮಾಡಿರುವೆ: ಅಣ್ಣಾಸಾಹೇಬ ಜೊಲ್ಲೆ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2024, 16:04 IST
Last Updated 27 ಮಾರ್ಚ್ 2024, 16:04 IST
ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಕಾರ್ಯಕರ್ತರನ್ನು ಅಣ್ಣಾಸಾಹೇಬ ಜೊಲ್ಲೆ ಹಾಗೂ ಮಾಜಿ ಶಾಸಕ ಮಹೇಶ ಕುಮಠಳ್ಳಿ ಅವರು ಅಥಣಿ ಕಾರ್ಯಾಲಯದಲ್ಲಿ ಬರಮಾಡಿಕೊಂಡರು
ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಕಾರ್ಯಕರ್ತರನ್ನು ಅಣ್ಣಾಸಾಹೇಬ ಜೊಲ್ಲೆ ಹಾಗೂ ಮಾಜಿ ಶಾಸಕ ಮಹೇಶ ಕುಮಠಳ್ಳಿ ಅವರು ಅಥಣಿ ಕಾರ್ಯಾಲಯದಲ್ಲಿ ಬರಮಾಡಿಕೊಂಡರು   

ಅಥಣಿ: ‘ಹತ್ತು ವರ್ಷಗಳ ಅವಧಿಯಲ್ಲಿ ನರೇಂದ್ರ ಮೋದಿ ಅವರ ಅವಧಿಯಲ್ಲಿ ಹಿಂದೆಂದೂ ಕಾಣದ ಅಭಿವೃದ್ಧಿ ಭಾರತ ದೇಶ ಕಂಡಿದೆ’ ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ಬಿಜೆಪಿ ಅಥಣಿ ಮಂಡಲದ ಪದಾಧಿಕಾರಿಗಳು ಬೂತ್ ಅಧ್ಯಕ್ಷರು, ಬಿಎಲ್‌ಎ-2 ಗಳ ಸಭೆ‌ ಹಾಗೂ ಚುನಾವಣೆ ಪೂರ್ವತಯಾರಿ ಸಭೆಯಲ್ಲಿ ಅವರು ಮಾತನಾಡಿದರು.

‘ಚಿಕ್ಕೋಡಿ ಕ್ಷೇತ್ರದ ಎಲ್ಲ ಜನತೆಗೆ ಕೇಂದ್ರ ಸರ್ಕಾರದ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ನಾನು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದೇವೆ’ ಎಂದರು.

ADVERTISEMENT

ಮಾಜಿ ಶಾಸಕರಾದ ಮಹೇಶ ಕುಮಠಳ್ಳಿ, ‘ದೇಶಕ್ಕೆ ಮೋದಿ ಅನಿವಾರ್ಯ. ಚಿಕ್ಕೋಡಿ ಕ್ಷೇತ್ರದಿಂದ ಅಣ್ಣಾಸಾಹೇಬ ಅವರನ್ನು ಗೆಲ್ಲಿಸಿ ಮೋದಿಯವರ ಕೈ ಬಲಪಡಿಸಬೇಕಿದೆ’ ಎಂದರು.

ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ರಾಜೇಶ ನೇರ್ಲಿ, ರವಿ ಸಂಕ, ಸಿದ್ದಪ್ಪ ಮುದಕಣ್ಣವರ, ರಮೇಶಗೌಡಾ ಪಾಟೀಲ, ಗಿರೀಶ ಬುಟಾಳಿ, ಧರೇಪ್ಪಾ ಠಕ್ಕಣ್ಣವರ, ಉಜ್ವಲಾ ಬಡವನಾಚೆ, ಸತ್ಯಪ್ಪಾ ಬಾಗೆನ್ನವರ, ಮಲ್ಲಪ್ಪಾ ಹಂಚಿನಾಳ‌, ಸಿದ್ದು ಪಾಟೀಲ, ಚೇತನ ಪಾಟೀಲ, ಸಿದ್ದು ಮಾಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.