ADVERTISEMENT

ಬೆಳಗಾವಿ: ಹಸಿರುಪಥದಲ್ಲಿ ಮತ್ತೊಂದು ಹೃದಯ ರವಾನೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2022, 5:29 IST
Last Updated 23 ಸೆಪ್ಟೆಂಬರ್ 2022, 5:29 IST
ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯಿಂದ ಬೆಳಗಾವಿಯ ಕೆಎಲ್ಇಎಸ್ ಆಸ್ಪತ್ರೆಗೆ ಶುಕ್ರವಾರ ನಸುಕಿನಲ್ಲಿ ಹೃದಯ ಸಾಗಿಸುವಲ್ಲಿ ವೈದ್ಯರ ತಂಡ ಯಶಸ್ವಿ
ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯಿಂದ ಬೆಳಗಾವಿಯ ಕೆಎಲ್ಇಎಸ್ ಆಸ್ಪತ್ರೆಗೆ ಶುಕ್ರವಾರ ನಸುಕಿನಲ್ಲಿ ಹೃದಯ ಸಾಗಿಸುವಲ್ಲಿ ವೈದ್ಯರ ತಂಡ ಯಶಸ್ವಿ   

ಬೆಳಗಾವಿ: ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯಿಂದ ಬೆಳಗಾವಿಯ ಕೆಎಲ್ಇಎಸ್ ಆಸ್ಪತ್ರೆಗೆ ಶುಕ್ರವಾರ ನಸುಕಿನಲ್ಲಿ ಹೃದಯ ಸಾಗಿಸುವಲ್ಲಿ ವೈದ್ಯರ ತಂಡ ಯಶಸ್ವಿಯಾಯಿತು.

ಆಪಘಾತದಿಂದಾಗಿ ಎಸ್.ಡಿ.ಎಂ ಆಸ್ಪತ್ರೆಗೆ ದಾಖಲಿಸಿದ್ದ ವ್ಯಕ್ತಿಯೊಬ್ಬರ ಮಿದುಳು ನಿಷ್ಕ್ರಿಯಗೊಂಡಿತ್ತು. ಅವರ ಕುಟುಂಬ ವರ್ಗದವರೊಂದಿಗೆ ಚರ್ಚಿಸಿದ ವೈದ್ಯರು ಹೃದಯ ದಾನ ಮಾಡಲು ಪ್ರೇರೇಪಿಸಿದರು.

ಶುಕ್ರವಾರ ನಸುಕಿನ 4ರ ಸುಮಾರಿಗೆ ಹೃದಯವನ್ನು ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಗೆ ತರಲಾಯಿತು. ಇದೇ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಆಂಬುಲೆನ್ಸ್ ಮೂಲಕ ಹೃದಯವನ್ನು ಯಶಸ್ವಿಯಾಗಿ ತಂದರು. ಹೃದ್ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಯಶಸ್ವಿ ಕಸಿ ಮಾಡಲಾಯಿತು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ADVERTISEMENT

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಜೀರೊ ಟ್ರಾಫಿಕ್ ನಿರ್ಮಾಣ ಮಾಡಿ ಸಹಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.