ಬೆಳಗಾವಿ: ಜೋರು ಗಾಳಿ-ಮಳೆಯಿಂದಾಗಿ ಖಾನಾಪುರ ತಾಲ್ಲೂಕಿನ ಪಾರವಾಡ ಗ್ರಾಮದ ಸರ್ಕಾರಿ ಶಾಲೆಯ ಚಾವಣಿ ಹಾರಿ ಹೋಗಿದೆ.
ಗ್ರಾಮದ ಕೆಲವು ಮನೆಗಳ ಹೆಂಚುಗಳು ಮತ್ತು ತಗಡಿನ ಶೀಟುಗಳು ಹಾರಿ ಹೋಗಿ ತೀವ್ರ ಹಾನಿ ಸಂಭವಿಸಿದೆ.
ವಿದ್ಯುತ್ ಸರಬರಾಜಿನಲ್ಲಿ ತೊಂದರೆಯಾಗಿದೆ. ವಿದ್ಯುತ್ ತಂತಿಗಳು ಒಂದಕ್ಕೊಂದು ಸಿಲುಕಿಕೊಂಡಿರುವ ಪರಿಣಾಮವಾಗಿ, ಈ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಇಲ್ಲವಾಗಿದೆ.
ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಹೆಸ್ಕಾಂನವರು ಆದಷ್ಟು ಬೇಗ ವಿದ್ಯುತ್ ಮಾರ್ಗ ಸರಿಪಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.