ADVERTISEMENT

ಪ್ರಶಸ್ತಿ ಪುರಸ್ಕೃತರಿಗೆ ಹೆಲಿಕಾಪ್ಟರ್‌ ವಿಹಾರ

ಗಮನ ಸೆಳೆದ ಮಾನವ ಬಂಧುತ್ವ ವೇದಿಕೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2021, 19:52 IST
Last Updated 10 ಜನವರಿ 2021, 19:52 IST
ಬೆಳಗಾವಿಯ ಗೋಕಾಕದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಹೆಲಿಕಾಪ್ಟರ್ ಹಾರಾಟದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಇದ್ದಾರೆ
ಬೆಳಗಾವಿಯ ಗೋಕಾಕದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಹೆಲಿಕಾಪ್ಟರ್ ಹಾರಾಟದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಇದ್ದಾರೆ   

ಗೋಕಾಕ: ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ ಅಂಗವಾಗಿ ಭಾನುವಾರ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳ ಪ್ರಶಸ್ತಿ ಪುರಸ್ಕಾರದ ಬಳಿಕ ವಿಜೇತರು ಹೆಲಿಕಾಪ್ಟರ್‌ನಲ್ಲಿ ಸುತ್ತಿ ವಿಶಿಷ್ಟ ಅನುಭವ ಪಡೆದರು.

ನಗರದ ಮಹರ್ಷಿ ವಾಲ್ಮೀಕಿಕ್ರೀಡಾಂಗಣದಲ್ಲಿ ಮಾವನ ಬಂಧುತ್ವ ವೇದಿಕೆ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಗೋಕಾಕ ನಗರ ಸೇರಿದಂತೆ ಸುತ್ತ-ಮುತ್ತಲಿನ ಪ್ರೇಕ್ಷಣೀಯ ಸ್ಥಳಗಳಸುತ್ತ ವಿಜೇತರಿಗೆ ಪ್ರದಕ್ಷಿಣೆ ಹಾಕಿಸಲಾಯಿತು. ಈ ಕುರಿತು ಮೊದಲೇ ಪ್ರಕಟಿಸಲಾಗಿತ್ತು.

ADVERTISEMENT

ಬೆಳಗಾವಿ, ಚಾಮರಾಜನಗರ, ತೀರ್ಥಹಳ್ಳಿ, ರಾಯಚೂರು, ಕಲಬುರ್ಗಿ, ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಬಂದಿದ್ದ 11 ವಿದ್ಯಾರ್ಥಿಗಳು ಪ್ರಶಸ್ತಿಗೆ ಭಾಜನರಾದರು.

ವೇದಿಕೆ ಸಂಸ್ಥಾಪಕ ಅಧ್ಯಕ್ಷ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಪುರಸ್ಕೃತರನ್ನು ಸತ್ಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.