ಬೆಳಗಾವಿ: ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದವರಿಗೆ ಸಹಾಯ ಹಸ್ತ ಚಾಚಲು ಶಾಸಕ ಸತೀಶ ಜಾರಕಿಹೊಳಿ ನೇತೃತ್ವದ ‘ಸತೀಶ ಜಾರಕಿಹೊಳಿ ಪ್ರತಿಷ್ಠಾನ’ ಈ ಬಾರಿಯೂ ಮುಂದೆ ಬಂದಿದೆ.
ಕೋವಿಡ್ ಮೊದಲನೇ ಅಲೆಯ ಸಂದರ್ಭದಲ್ಲೂ ಬಡವರಿಗೆ ನೆರವಾಗಿತ್ತು.
‘ಕೊರೊನಾಕ್ಕೆ ಜನರು ಭಯಪಡುವ ಅಗತ್ಯವಿಲ್ಲ. ಸುರಕ್ಷತಾ ನಿಯಮಗಳನ್ನು ಪಾಲಿಸುವ ಮೂಲಕ ಪ್ರತಿಯೊಬ್ಬರೂ ಕೊರೊನಾದಿಂದ ದೂರ ಇರಬಹುದು. ವೈದ್ಯಕೀಯ ಆಕ್ಸಿಜನ್ ಸಿಲಿಂಡರ್, ಮಾಸ್ಕ್, ಸ್ಯಾನಿಟೈಸರ್ ಸೇರಿ ಇನ್ನಿತರೆ ಯಾವುದೇ ನೆರವಿನ ಅಗತ್ಯವಿದ್ದರೆ ಪ್ರತಿಷ್ಠಾನ ಅಥವಾ ಗೋಕಾಕದ ಹಿಲ್ ಗಾರ್ಡನ್ ಕಚೇರಿಗೆ ಭೇಟಿ ನೀಡಬಹುದು. ಮೊ: 9448110461/ 9113026074 ಸಂಪರ್ಕಿಸಬಹುದು’ ಎಂದು ಸತೀಶ ಶುಗರ್ಸ್ ನಿರ್ದೇಶಕಿ ಪ್ರಿಯಾಂಕಾ ಜಾರಕಿಹೊಳಿ ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.