ADVERTISEMENT

ಕಾಗವಾಡ | ಲಂಚ ಪಡೆದ ಹೆಸ್ಕಾಂ ಅಧಿಕಾರಿ: ಹರಿದಾಡಿದ ವಿಡಿಯೊ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2025, 2:19 IST
Last Updated 2 ಸೆಪ್ಟೆಂಬರ್ 2025, 2:19 IST
ಕಾಗವಾಡ ತಾಲ್ಲೂಕಿನ ಉಗಾರ ಖುರ್ದನ ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ದುರ್ಯೋಧನ ಮಾಳಿ ಹಣ ಎಣಿಸಿದ ವಿಡಿಯೊ ತುಣುಕು
ಕಾಗವಾಡ ತಾಲ್ಲೂಕಿನ ಉಗಾರ ಖುರ್ದನ ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ದುರ್ಯೋಧನ ಮಾಳಿ ಹಣ ಎಣಿಸಿದ ವಿಡಿಯೊ ತುಣುಕು   

ಕಾಗವಾಡ (ಬೆಳಗಾವಿ ಜಿಲ್ಲೆ): ಹೆಸ್ಕಾಂ ಉಗಾರ ಖುರ್ದ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ದುರ್ಯೋಧನ ಮಾಳಿ ಎಂಬುವರು ರೈತರೊಬ್ಬರಿಂದ ಲಂಚ ಪಡೆದಿದ್ದಾರೆ ಎನ್ನಲಾದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಸೋಮವಾರ ಹರಿದಾಡಿದೆ.

ಶಿರುಗುಪ್ಪಿಯ ರೈತ ವಿದ್ಯುತ್ ಪರಿವರ್ತಕ ಮತ್ತು ವಿದ್ಯುತ್‌ ಇಲಾಖೆಗೆ ಸಂಬಂಧಿಸಿದ ಕೆಲಸ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ₹3 ಸಾವಿರ ಲಂಚ ಪಡೆಯುವಾಗ ರೈತರೆ ವಿಡಿಯೊ ಮಾಡಿದ್ದಾರೆ. ಅಧಿಕಾರಿ ಟೇಬಲ್‌ ಮೇಲೆ ಕುಳಿತು ಹಣ ಎಣಿಸಿ ಜೇಬಿನಲ್ಲಿ ಇಟ್ಟುಕೊಳ್ಳುವುದು ವಿಡಿಯೊದಲ್ಲಿದೆ. ಈ ತಕ್ಷಣಕ್ಕೆ ನಿಮ್ಮ ಕೆಲಸ ಮಾಡಿಸಿ ಕೊಡುತ್ತೇನೆ ಎಂದು ಅಧಿಕಾರಿ ಹೇಳಿದ ಮಾತುಗಳೂ ವಿಡಿಯೊದಲ್ಲಿವೆ. 

ಆದರೆ, ಈ ಬಗ್ಗೆ ರೈತ ದೂರು ನೀಡಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿಬಿಟ್ಟಿದ್ದಾರೆ. ಇದು ಯಾವಾಗ ನಡೆದಿದೆ ಎಂಬ ಬಗ್ಗೆಯೂ ರೈತ ಯಾವುದೇ ಮಾಹಿತಿ ನೀಡಿಲ್ಲ.

ADVERTISEMENT
ಧುರ್ಯೋದನ ಮಾಳಿ ಅವರ ಮೇಲೆ ಆರೋಪ ಕೇಳಿ ಬಂದ ತಕ್ಷಣ ಅವರನ್ನು ಅಮಾನತು ಮಾಡಲಾಗಿದೆ. ಇಲಾಖಾ ತನಿಖೆಗೆ ನಡೆಯಲಿದೆ
ಪ್ರವೀಣಕುಮಾರ ಚಿಕ್ಕಾಡೆ ಮುಖ್ಯ ಎಂಜಿನಿಯರ್‌ ಹೆಸ್ಕಾಂ ಬೆಳಗಾವಿ (ಪ್ರಭಾರಿ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.