ADVERTISEMENT

ನಾನು ಆಕ್ಟಿವ್ ಸಚಿವ: ಜವಳಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ

​ಪ್ರಜಾವಾಣಿ ವಾರ್ತೆ
Published 15 ಜನವರಿ 2021, 15:32 IST
Last Updated 15 ಜನವರಿ 2021, 15:32 IST
ಶ್ರೀಮಂತ ಪಾಟೀಲ
ಶ್ರೀಮಂತ ಪಾಟೀಲ   

ಬೆಳಗಾವಿ: ‘ನಾನು ಆಕ್ಟಿವ್ (ಕ್ರಿಯಾಶೀಲ) ಸಚಿವ. ಕೆಲಸ ಮಾಡುತ್ತೇನೆ; ಪ್ರಚಾರದ ಗೋಜಿಗೆ ಹೋಗುವುದಿಲ್ಲ. ಆದ್ದರಿಂದ ನನ್ನ ಆಕ್ಟಿವಿಟಿ ಮತ್ತು ನನ್ನ ಖಾತೆಯ ಆಕ್ಟಿವಿಟಿ ಗೊತ್ತಾಗುವುದಿಲ್ಲ. ಇನ್ಮುಂದೆ ಪ್ರಚಾರ ಪಡೆಯುವುದಕ್ಕೂ ಪ್ರಯತ್ನಿಸುತ್ತೇನೆ’ ಎಂದು ಜವಳಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ ಹೇಳಿದರು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿ ಸಮಾವೇಶದ ಸಿದ್ಧತೆಯನ್ನು ಶುಕ್ರವಾರ ವೀಕ್ಷಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನನ್ನನ್ನು ಸಂಪುಟದಿಂದ ಕೈಬಿಡುತ್ತಾರೆ. ನಾನು ಆ್ಯಕ್ಟಿವ್ ಸಚಿವ ಅಲ್ಲ ಎನ್ನುವುದು ಸುಳ್ಳು ಸುದ್ದಿಯಾಗಿದೆ. ಅಲ್ಪಸಂಖ್ಯಾತ ಸಮುದಾಯದ ಯಾರನ್ನೇ ಕೇಳಿದರೂ ನಾನೆಷ್ಟು ಕ್ರಿಯಾಶೀಲ ಎನ್ನುವುದು ತಿಳಿಯುತ್ತದೆ’ ಎಂದರು.

‘ನಾನು ಬಾಂಬೆ ತಂಡದವನಲ್ಲ. ಕೆಲವರಿಗೆ ಸಚಿವ ಸ್ಥಾನ ಕೈತಪ್ಪಲು ಕಾನೂನು ಸಮಸ್ಯೆ ಕಾರಣವಾಗಿರಬಹುದು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊಟ್ಟ ಮಾತಿಗೆ ತಪ್ಪುವವರಲ್ಲ. ಅವರ ಮೇಲೆ ಸಂಪೂರ್ಣ ವಿಶ್ವಾಸವಿದೆ. ಕೊಟ್ಟ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದೇನೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.